ಕೊಲಂಬೊ (ಪಿಟಿಐ): ಶ್ರೀಲಂಕಾ ಕ್ರಿಕೆಟಿಗ ಸನತ್ ಜಯಸೂರ್ಯ ಅವರು ಇಲ್ಲಿನ ದಕ್ಷಿಣ ಕೊಲಂಬೊದಿಂದ 160 ಕಿ.ಮೀ ದೂರದಲ್ಲಿರುವ ಮತಾರ ಎಂಬಲ್ಲಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.
ಆದರೆ ಈ ಅಪಘಾತದಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಜಯಸೂರ್ಯ ಪ್ರಯಾಣಿಸುತ್ತಿದ್ದ ವಾಹನವು ಮೋಟಾರ್ ಸೈಕಲ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಜಯಸೂರ್ಯ ಅವರಿಗೆ ಯಾವುದೇ ಗಾಯವಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಜಯಸೂರ್ಯ ಮತಾರ ಕ್ಷೇತ್ರದ ಆಡಳಿತ ಪಕ್ಷದ ಸಂಸತ್ ಸದಸ್ಯರೂ ಸಹ ಆಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.