ADVERTISEMENT

ಇಂದು ಬೆಂಗಳೂರಿಗೆ ಆನಂದ್

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2011, 16:30 IST
Last Updated 5 ಫೆಬ್ರುವರಿ 2011, 16:30 IST

ಬೆಂಗಳೂರು: ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಅವರು ಎನ್‌ಐಐಟಿ ಕಾರ್ಪೋರೇಟ್ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ಮೊದಲ 20 ಸ್ಥಾನ ಗಳಿಸಿದ ಉದ್ಯಮಿ ಗಳೊಂದಿಗೆ ಏಕಕಾಲಕ್ಕೆ ಚೆಸ್ ಆಡಲು ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಈ ಚಾಂಪಿಯನ್‌ಷಿಪ್ ಇಲ್ಲಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ‘ಪಿ’ ಹಾಲ್‌ನಲ್ಲಿ ಸಂಜೆ 5.30ಕ್ಕೆ ನಡೆಯ ಲಿದೆ. ಇಂಟೆಲ್, ವಿಪ್ರೋ, ಟಿಸಿಎಸ್, ಎಕ್ಸೆಂಜರ್,  ಮಣಿಪಾಲ್ ಹಾಸ್ಟಿ ಟಲ್, ಸೇರಿ ದಂತೆ 50ಕ್ಕೂ ಹೆಚ್ಚು ಪ್ರಮುಖ ಕಾರ್ಪೋರೇಟ್ ಸಂಸ್ಥೆಗಳ ಉದ್ಯಮಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.