ಮುಂಬೈ : ‘ಈ ಸಲದ ಐಪಿಎಲ್ ಕಪ್ ಗೆಲ್ಲುವ ನೆಚ್ಚಿನ ತಂಡ ಎಂಬ ಆತ್ಮವಿಶ್ವಾಸದಿಂದ ನಾವು ಬೀಗುವುದಿಲ್ಲ. ಬದಲಿಗೆ, ನಮ್ಮ ತಂಡವು ಕೆಳಹಂತದಿಂದ ಅಭ್ಯಾಸ ನಡೆಸುತ್ತಿದೆ. ಹಾಲಿ ಚಾಂಪಿಯನ್ಗಳೆಂಬ ಹೆಮ್ಮೆ ಇದ್ದರೂ, ಹಿಂದಿನ ಬಾರಿಗಿಂತ ಈ ಸಲ ಉತ್ತಮ ಆಟವಾಡುವ ರೀತಿ ಸಿದ್ಧತೆ ಮಾಡಿಕೊಳ್ಳಲಿದ್ದೇವೆ’ ಎಂದು ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಹೇಳಿದ್ದಾರೆ.
ಇಲ್ಲಿ ಗುರುವಾರ ನಡೆದಸುದ್ದಿಗೋಷ್ಠಿ ಅವರು ಮಾತನಾಡಿದರು.
‘ಈ ಸಲ, ಎಲ್ಲ ತಂಡಗಳಲ್ಲೂ ಹೊಸ ಆಟಗಾರರಿದ್ದಾರೆ. ಆದ್ದರಿಂದ ಎಚ್ಚರವಾಗಿ ಆಡಬೇಕಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
‘ನಮ್ಮ ತಂಡದ ನಾಯಕ ರೋಹಿತ್ ಶರ್ಮಾ ಉತ್ತಮ ನಾಯಕತ್ವದ ಗುಣಗಳನ್ನು ಹೊಂದಿದ್ದಾರೆ. ಅವರು ಅನೇಕ ಯುವ ಆಟಗಾರರಿಗೆ ಸಲಹೆ ನೀಡುತ್ತಾರೆ. ಪ್ರತಿಯೊಬ್ಬರೂ ಅತ್ಯುತ್ತಮ ಆಟವಾಡಬೇಕು ಎಂಬುದು ರೋಹಿತ್ ಉದ್ದೇಶ’ ಎಂದು ತಿಳಿಸಿದ್ದಾರೆ.
‘ಇನ್ನೂ, ಯಾವುದೇ ರೀತಿಯ ಸನ್ನಿವೇಶದಲ್ಲಿ ಆತಂಕಕ್ಕೊಳಗಾಗದ ರೀತಿ ಬೌಲಿಂಗ್ ಮಾಡುವ ಜಸ್ಪ್ರೀತ್ ಬೂಮ್ರಾ ನಮ್ಮ ತಂಡದ ಬೌಲಿಂಗ್ ಶಕ್ತಿ. ಬೌಲಿಂಗ್ನಲ್ಲಿ, ಹಾರ್ದಿಕ್ ಪಾಂಡ್ಯ ಕೂಡ ಉತ್ತಮ ಪ್ರಗತಿ ಸಾಧಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡವು, ತನ್ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ಕಿಂಗ್ಸ್ ತಂಡವನ್ನು ಎದುರಿಸಲಿದೆ. ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ಚೆನ್ನೈ ತಂಡವು ಈ ಬಾರಿ ಐಪಿಎಲ್ಗೆ ಮರಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.