ADVERTISEMENT

ಐದನೇ ಬೌಲರ್ ಕೊರತೆ ಕಾಡುತ್ತಿದೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2012, 19:30 IST
Last Updated 16 ಏಪ್ರಿಲ್ 2012, 19:30 IST

ಬೆಂಗಳೂರು: ರಾಯಲ್    ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯ ಐದನೇ ಅವತರಣಿಕೆಯ ಟೂರ್ನಿಯಲ್ಲಿ ಐದನೇ ಬೌಲರ್‌ನ ಕೊರತೆ ಎದುರಿಸುತ್ತಿದೆ! ಅದು ಭಾನುವಾರ ನಡೆದ ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ.

`ಐದನೇ ಬೌಲರ್ ಕೊರತೆ ಎಲ್ಲ ಸಮಸ್ಯೆಗಳಿಗೆ ಕಾರಣ~ ಎಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಬಳಿಕ ಆರ್‌ಸಿಬಿ ನಾಯಕ ಡೇನಿಯಲ್ ವೆಟೋರಿ ಹೇಳಿದರು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ಸ್ ಈ ಪಂದ್ಯದಲ್ಲಿ 59 ರನ್‌ಗಳ ಗೆಲುವು ಪಡೆದಿತ್ತು.

ಗೆಲುವಿಗೆ 196 ರನ್‌ಗಳ ಗುರಿ ಬೆನ್ನಟ್ಟಿದ್ದ ರಾಯಲ್ ಚಾಲೆಂಜರ್ಸ್ 19.5 ಓವರ್‌ಗಳಲ್ಲಿ 136 ರನ್‌ಗಳಿಗೆ ಆಲೌಟಾಗಿತ್ತು. `ಈ ಪಂದ್ಯದಲ್ಲಿ ಕೆಲವು ಪ್ರಮುಖ ಬೌಲರ್‌ಗಳೂ ಹೆಚ್ಚು ರನ್ ಬಿಟ್ಟುಕೊಟ್ಟರು. ಆದರೆ ಐದನೇ ಬೌಲರ್‌ನ ಕೊರತೆ ಎಲ್ಲ ಸಮಸ್ಯೆಗಳಿಗೆ ಮೂಲ ಕಾರಣ. ಇದು ಟೂರ್ನಿಯ ಆರಂಭದಿಂದಲೇ ಕಾಡುತ್ತಿದೆ~ ಎಂದು ವೆಟೋರಿ ನುಡಿದರು.

`ಕೊನೆಯ ಐದು ಅಥವಾ ಆರು ಓವರ್‌ಗಳಲ್ಲಿ ಎದುರಾಳಿ ತಂಡಕ್ಕೆ 100 ರನ್‌ಗಳನ್ನು ಬಿಟ್ಟುಕೊಡುವುದರಲ್ಲಿ ಅರ್ಥವಿಲ್ಲ~ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.