ADVERTISEMENT

ಕರ್ನಾಟಕ ತಂಡಕ್ಕೆ ಕಂಚು

ಪಿಟಿಐ
Published 23 ಫೆಬ್ರುವರಿ 2018, 19:30 IST
Last Updated 23 ಫೆಬ್ರುವರಿ 2018, 19:30 IST

ಬೆಂಗಳೂರು: ಕರ್ನಾಟಕ ಪುರುಷರ ತಂಡ ಛತ್ತೀಸಗಡದ ಭಿಲಾಯ್‌ನಲ್ಲಿ ನಡೆದ ಅಖಿಲ ಭಾರತ ಅಂತರ ರಾಜ್ಯಗಳ ಪುರುಷರ ಟೆನಿಸ್ ಟೂರ್ನಿಯಲ್ಲಿ ಕಂಚಿನ ಪದಕ ಪಡೆದಿದೆ.

ಶುಕ್ರವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಕರ್ನಾಟಕ 0–2ರಲ್ಲಿ ಮಹಾರಾಷ್ಟ್ರ ಎದುರು ಸೋತಿತು. ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ಬಿ.ಆರ್.ನಿಕ್ಷೇಪ್‌ 1–6, 1–6ರಲ್ಲಿ ಆರ್ಯನ್ ಎದುರು ಸೋತರು. ಇನ್ನೊಂದು ಪಂದ್ಯದಲ್ಲಿ ರಿಷಿ ರೆಡ್ಡಿ 2–6, 1–6ರಲ್ಲಿ ಅರ್ಜುನ್ ಖಾಡೆ ಎದುರು ಪರಾಭವಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT