ಹಾಸನ: ಹಾಸನ ನಗರಾಭಿವೃದ್ಧಿ ಪ್ರಾಧಿಕಾರ (ಹುಡಾ) ನೂತನವಾಗಿ ನಿರ್ಮಿಸಿರುವ ಎಸ್.ಎಂ.ಕೃಷ್ಣ ಬಡಾವಣೆಯಲ್ಲಿ ಅಂತರರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ 14 ಎಕರೆ ಜಾಗವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) ಶನಿವಾರ ಪಶುಸಂಗೋಪನೆ ಸಚಿವ ಎ.ಮಂಜು ಹಸ್ತಾಂತರಿಸಿದರು.
‘36 ತಿಂಗಳಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಬೇಕು’ ಎಂದು ಸಚಿವರು ಮನವಿ ಮಾಡಿದರು. 453 ಎಕರೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣವಾಗಿದೆ. ಕೆಎಸ್ಸಿಎ ಅಧ್ಯಕ್ಷ ಸಂಜಯ್ ದೇಸಾಯಿ ಅವರಿಗೆ ಒಪ್ಪಂದ ಪತ್ರ ನೀಡಲಾಯಿತು. ಸಮಾರಂಭದಲ್ಲಿ ಕರ್ನಾಟಕ ರಣಜಿ ತಂಡದ ನಾಯಕ ಆರ್. ವಿನಯಕುಮಾರ್ ಮತ್ತು ಸಹ ಆಟಗಾರರನ್ನು ಅಭಿನಂದಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.