ADVERTISEMENT

ಕ್ರಿಕೆಟ್: ದೋನಿ ಪಡೆಗೆ ದಂಡ

​ಪ್ರಜಾವಾಣಿ ವಾರ್ತೆ
Published 22 ಜುಲೈ 2012, 19:30 IST
Last Updated 22 ಜುಲೈ 2012, 19:30 IST

ಹಂಬಂಟೋಟಾ (ಪಿಟಿಐ): ಶ್ರೀಲಂಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ ಕಾರಣಕ್ಕಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ ಹಾಗೂ ಉಳಿದ ಆಟಗಾರರಿಗೆ ದಂಡ ವಿಧಿಸಿದೆ.

ಪಂದ್ಯದ ಶೇ. 20ರಷ್ಟು ಹಣವನ್ನು ದೋನಿ ಮತ್ತು ಉಳಿದ ಆಟಗಾರರು ಶೇ. 10ರಷ್ಟು ಹಣವನ್ನು ದಂಡ ರೂಪದಲ್ಲಿ ಕಟ್ಟಬೇಕಿದೆ.

`ಭಾರತ ತಂಡ ನಿಧಾನಗತಿಯಲ್ಲಿ ಬೌಲಿಂಗ್ ನಡೆಸಿದೆ. ಆದ ಕಾರಣ ಈ ದಂಡ ಹಾಕಲಾಗಿದೆ~ ಎಂದು ಪಂದ್ಯದ ರೆಫರಿ ಕ್ರಿಸ್ ಬ್ರಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪಂದ್ಯದಲ್ಲಿ ಭಾರತ 21 ರನ್‌ಗಳ ಗೆಲುವು ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.