ADVERTISEMENT

ಕ್ರೀಡಾನಿಲಯದಲ್ಲಿ ಹಬ್ಬಿದ ಡೆಂಗಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2017, 19:43 IST
Last Updated 12 ಅಕ್ಟೋಬರ್ 2017, 19:43 IST

ಬೆಂಗಳೂರು: ಇಲ್ಲಿನ ಕಂಠೀರವ ಕ್ರೀಡಾ ನಿಲಯದ ಅಥ್ಲೀಟ್‌ಗಳಲ್ಲಿ ಡೆಂಗಿ ಹಬ್ಬಿರುವುದು ಬೆಳಕಿಗೆ ಬಂದಿದೆ. ಆರು ವಿದ್ಯಾರ್ಥಿಗಳು ಕಳೆದ ಒಂದು ತಿಂಗಳಿನಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದಾರೆ.

ಇತ್ತೀಚೆಗೆ ಸುರಿದ ಭಾರಿ ಮಳೆ ಯಿಂದಾಗಿ ಕ್ರೀಡಾನಿಲಯದ ಸುತ್ತ ಕೊಳಚೆ ತುಂಬಿಕೊಂಡಿದೆ. ಸೊಳ್ಳೆಗಳ ಕಾಟವೂ ವಿಪರೀತವಾಗಿದೆ. ಡೆಂಗಿ ಜ್ವರ ವ್ಯಾಪಿಸಲು ಇದೇ ಕಾರಣ ಎಂದು ಕೆಲವರು ದೂರಿದ್ದಾರೆ. ಕ್ರೀಡಾ ನಿಲಯದಲ್ಲಿ ಕಳಪೆ ಆಹಾರ ವಿತರಿಸಲಾಗುತ್ತಿದೆ ಎಂದು ಪ್ರತಿಭಟನೆ ಕೂಡ ನಡೆಸಲಾಗಿತ್ತು.

‘ಡೆಂಗಿ ಜ್ವರದ ಸಮಸ್ಯೆ ಹೆಚ್ಚಾಗಿದೆ. ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ವರದಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಪರಿಹಾರ ಸಿಕ್ಕಿಲ್ಲ. ಬಿಬಿಎಂಪಿ ಕೂಡ ಸಮಸ್ಯೆಗೆ ಸ್ಪಂದಿಸಿಲ್ಲ’ ಎಂದು ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.