ADVERTISEMENT

ಗಂಭೀರ್ ಆತಂಕಪಡಬೇಕಿಲ್ಲ - ದ್ರಾವಿಡ್

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2012, 19:30 IST
Last Updated 5 ಮಾರ್ಚ್ 2012, 19:30 IST

ಮುಂಬೈ (ಪಿಟಿಐ): ಭಾರತ ತಂಡದಲ್ಲಿ ತನ್ನ ಸ್ಥಾನಕ್ಕೆ ಕುತ್ತುಂಟಾಗಬಹುದು ಎಂದು ಗೌತಮ್ ಗಂಭೀರ್ ಆತಂಕಪಡುವ ಅಗತ್ಯವಿಲ್ಲ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಮುಂದಿನ ಏಷ್ಯಾ ಕಪ್ ಟೂರ್ನಿಗೆ ವಿರಾಟ್ ಕೊಹ್ಲಿ ಅವರನ್ನು ಭಾರತ ತಂಡದ ಉಪನಾಯಕನಾಗಿ ನೇಮಿಸಲಾಗಿದೆ. ಗಂಭೀರ್ ಬದಲು ಕೊಹ್ಲಿಗೆ ಅವಕಾಶ ನೀಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಮಾತ್ರವಲ್ಲ ತಂಡದಲ್ಲಿ ಗಂಭೀರ್ ಸ್ಥಾನಕ್ಕೆ ಕುತ್ತುಂಟಾಗುವ ಸಾಧ್ಯತೆ ಇದು ಎಂದು ವರದಿಯಾಗಿತ್ತು.
 
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.