ADVERTISEMENT

ಟ್ರೋಫಿ ಗೆಲ್ಲಲು ಉತ್ತಮ ಅವಕಾಶ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2011, 19:30 IST
Last Updated 23 ಮಾರ್ಚ್ 2011, 19:30 IST

ಕೊಲಂಬೊ (ಪಿಟಿಐ): ತವರು ನೆಲದಲ್ಲಿಯೇ ಕ್ವಾರ್ಟರ್‌ಫೈನಲ್ ಹಾಗೂ ಒಂದು ಸೆಮಿಫೈನಲ್ ಪಂದ್ಯ ನಡೆಯುವುದರಿಂದ ಈ ಸಲದ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ತಂಡ ಟ್ರೋಫಿ  ಗೆಲ್ಲಲು ಉತ್ತಮ ಅವಕಾಶ ಎಂದು ಲಂಕಾ ತಂಡದ ಮಾಜಿ ನಾಯಕ ಅರ್ಜುನ ರಣತುಂಗಾ ಅಭಿಪ್ರಾಯಪಟ್ಟಿದ್ದಾರೆ.

‘ಕೊಲಂಬೊದಲ್ಲಿಯೇ ಕ್ವಾರ್ಟರ್‌ಫೈನಲ್ ಹಾಗೂ ಒಂದು ಸೆಮಿಫೈನಲ್ ಪಂದ್ಯ ನಡೆಯಲಿದೆ. ಇದು ಆತಿಥೇಯ ಆಟಗಾರರಿಗೆ ಅನುಕೂಲವಾಗಲಿದೆ. ಲಂಕಾ ತಂಡ ಈ ಅವಕಾಶವನ್ನು ಉಪಯೋಗ ಪಡಿಸಿಕೊಂಡರೆ 15 ವರ್ಷಗಳ ನಂತರ ಮತ್ತೆ ಟ್ರೋಫಿಯನ್ನು ಗೆಲ್ಲಬಹುದು’ ಎಂದು ಅವರು ಹೇಳಿದ್ದಾರೆ. ಶ್ರೀಲಂಕಾ ಈ ಮೊದಲು 1996ರ ವಿಶ್ವಕಪ್‌ನಲ್ಲಿ ಟ್ರೋಫಿ ಜಯಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT