ADVERTISEMENT

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀಶಾಂತ್‌

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 19:30 IST
Last Updated 12 ಡಿಸೆಂಬರ್ 2013, 19:30 IST
ಕ್ರಿಕೆಟಿಗ ಎಸ್. ಶ್ರೀಶಾಂತ್ ಗುರುವಾಯೂರಿನ ಶ್ರೀ ಕೃಷ್ಣ ದೇಗುಲದಲ್ಲಿ ಗುರುವಾರ ರಾಜಸ್ಥಾನದ ಭುವನೇಶ್ವರಿ ಕುಮಾರಿ ಅವರನ್ನು ವಿವಾಹವಾದರು   	–ಪಿಟಿಐ ಚಿತ್ರ
ಕ್ರಿಕೆಟಿಗ ಎಸ್. ಶ್ರೀಶಾಂತ್ ಗುರುವಾಯೂರಿನ ಶ್ರೀ ಕೃಷ್ಣ ದೇಗುಲದಲ್ಲಿ ಗುರುವಾರ ರಾಜಸ್ಥಾನದ ಭುವನೇಶ್ವರಿ ಕುಮಾರಿ ಅವರನ್ನು ವಿವಾಹವಾದರು –ಪಿಟಿಐ ಚಿತ್ರ   

ಗುರುವಾಯೂರಂ (ಪಿಟಿಐ):  ಭಾರತ ತಂಡದ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ ರಾಜಸ್ಥಾನದ ಪ್ರತಿಷ್ಠಿತ ಮನೆತನದ ಭುವನೇಶ್ವರಿ ಕುಮಾರಿ ಅವರನ್ನು ವರಿಸಿದರು.

ಗುರುವಾರ ಬೆಳಿಗ್ಗೆ ಇಲ್ಲಿನ ಶ್ರೀ ಕೃಷ್ಣ ದೇವಾಲಯದಲ್ಲಿ ನಡೆದ ಸರಳ ವಿವಾಹ ಸಮಾರಂಭದಲ್ಲಿ ಈ ಜೋಡಿ ನವ ಜೀವನಕ್ಕೆ ಕಾಲಿಟ್ಟಿತು. ಸಮಾರಂಭದಲ್ಲಿ ಕೆಲವೇ ಕೆಲವು ಸ್ನೇಹಿತರು ಹಾಗೂ ಸಂಬಂಧಿಕರು ಮಾತ್ರ ಪಾಲ್ಗೊಂಡಿದ್ದರು.

ವೃತ್ತಿಯಲ್ಲಿ ಆಭರಣ ವಿನ್ಯಾಸಕಿಯಾ ಗಿರುವ ಭುವನೇಶ್ವರಿ ಹಾಗೂ ಶ್ರೀಶಾಂತ್ ಕಳೆದ ಆರು ವರ್ಷಗಳಿಂದ ಪರಿಚಿತರಾ ಗಿದ್ದರು.

ಐಪಿಎಲ್ 6 ನೇ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡಿದ್ದ ಶ್ರೀಶಾಂತ್ ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದರು. ಹೀಗಾಗಿ  ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ  ಜಾಮೀನು  ಮೇಲೆ ಹೊರಬಂದಿದ್ದಾರೆ. ಅವರ ಮೇಲೆ ಬಿಸಿಸಿಐ ಆಜೀವ ನಿಷೇಧ ಹೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.