ನವದೆಹಲಿ (ಪಿಟಿಐ): ಅಂತರರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್ನಿಂದ ನಿವೃತ್ತಿಯಾಗಲು ನಿರ್ಧರಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ವೀರೇಂದ್ರ ಸೆಹ್ವಾಗ್, ಈ ಬಗ್ಗೆ ಮಾಧ್ಯಮವೊಂದರಲ್ಲಿ ಬಂದ ವರದಿಯನ್ನು ತಳ್ಳಿಹಾಕಿದ್ದಾರೆ.
`ಇನ್ನೊಂದು ಸುಳ್ಳು ಸುದ್ದಿ ಹರಿದಾಡುತ್ತಿದೆ! ಯಾವುದೇ ಪ್ರಕಾರದ ಪಂದ್ಯದಲ್ಲಿ ವಿಶ್ರಾಂತಿ ನೀಡಬೇಕೆಂದು ಕೋರಿ ನಾನು ಬಿಸಿಸಿಐಯನ್ನು ಸಂಪರ್ಕಿಸಿಲ್ಲ~ ಎಂದು ಸೆಹ್ವಾಗ್ `ಟ್ವಿಟರ್~ನಲ್ಲಿ ಬರೆದಿದ್ದಾರೆ.
`ಸೆಹ್ವಾಗ್ ಏಕದಿನ ಮತ್ತು ಟೆಸ್ಟ್ ಪಂದ್ಯಗಳತ್ತ ಹೆಚ್ಚಿನ ಗಮನ ಹರಿಸುವ ಉದ್ದೇಶದಿಂದ ಟ್ವೆಂಟಿ-20 ಕ್ರಿಕೆಟ್ನಿಂದ ನಿವೃತ್ತಿಯಾಗುತ್ತಿದ್ದಾರೆ. ಈ ಕುರಿತು ಬಿಸಿಸಿಐಗೆ ಪತ್ರ ಬರೆದಿದ್ದಾರೆ~ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.