ADVERTISEMENT

ಪಂದ್ಯದ ವೇಳೆ ಹೃದಯಾಘಾತ ಸಾವು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2018, 20:04 IST
Last Updated 1 ಮಾರ್ಚ್ 2018, 20:04 IST
ಅಜಯ್ ವಿಠಲ್
ಅಜಯ್ ವಿಠಲ್   

ಬೆಂಗಳೂರು: ಕ್ರಿಕೆಟ್‌ ಆಡುತ್ತಿದ್ದಾಗ ಹೃದಯಾಘಾದಿಂದ ಪತ್ರಿಕಾ ಕಚೇರಿಯ ಉದ್ಯೋಗಿ ಅಜಯ್ ವಿಠಲ್ ಜಗದೀಶ್ (33) ಸಾವಿಗೀಡಾಗಿದ್ದಾರೆ.

ಸರಳ ಜೀವನ ವಾಹಿನಿಯ ಮಾರ್ಕೆಟಿಂಗ್ ವಿಭಾಗದಲ್ಲಿದ್ದ ಅವರು ದೂರದರ್ಶನ ಏರ್ಪಡಿಸಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಆಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾರೆ.

ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲದ ಆದಿತ್ಯ ಗ್ಲೋಬಲ್‌ ಮೈದಾನದಲ್ಲಿ ಟೂರ್ನಿ ಆಯೋಜಿಸಲಾಗಿತ್ತು. ಅವರ ನಿಧನದ ಕಾರಣ ಗುರುವಾರದ ಪಂದ್ಯಗಳನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.