ADVERTISEMENT

ಫುಟ್‌ಬಾಲ್: ಕ್ವಾರ್ಟರ್‌ ಫೈನಲ್‌ಗೆ ಗಜಾನನ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2013, 19:30 IST
Last Updated 24 ಡಿಸೆಂಬರ್ 2013, 19:30 IST

ಬೆಂಗಳೂರು: ಶ್ರೀಗಜಾನನ ತಂಡ ಬಿಯುಎಫ್‌ಸಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಗದೀಶ್ವರಾಚಾರ್‌ ಸ್ಮಾರಕ ಫುಟ್‌ಬಾಲ್‌ ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಗಜಾನನ 3–1 ಗೋಲುಗಳಿಂದ ಮಿನರ್ವ ಎದುರು ಗೆಲುವು ಸಾಧಿಸಿತು.

ಸೂರನ್‌ 36 ಮತ್ತು 40ನೇ ನಿಮಿಷದಲ್ಲಿ ಗೋಲು ಗಳಿಸಿದರೆ, ವಿಕ್ರಮ್‌ 39ನೇ ನಿಮಿಷದಲ್ಲಿ ಗೋಲು ತಂದಿತ್ತು ಗೆಲುವಿನ ರೂವಾರಿ ಎನಿಸಿದರು. ಮಿನರ್ವ ತಂಡದ ಏಕೈಕ ಗೋಲನ್ನು ಕಿಶೋರ್ ಗಳಿಸಿ ಸೋಲಿನ ಅಂತರ ತಗ್ಗಿಸಿದರು. ಜುಪಿಟರ್‌ ತಂಡದ ಎದುರು ವಾಕ್‌ ಓವರ್‌ ಪಡೆದ ಧರ್ಮರಾಜ್‌ ಯೂನಿಯನ್‌ ಎಂಟರ ಘಟ್ಟಕ್ಕೆ ಲಗ್ಗೆ ಇಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.