ಚೆನ್ನೈ (ಪಿಟಿಐ): ಬಿಸಿಸಿಐ ಕಾರ್ಯಕಾರಿ ಸಮಿತಿಯ ತುರ್ತು ಸಭೆ ಭಾನುವಾರ ಮಧ್ಯಾಹ್ನ ಚೆನ್ನೈನ ಪಾರ್ಕ್ ಶೆರಟಾನ್ ಹೋಟೆಲ್ನಲ್ಲಿ ಆರಂಭವಾಗಿದೆ.
ಮಂಡಳಿಯ ಉಪಾಧ್ಯಕ್ಷರೂ ಹಾಗೂ ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ , ರಾಜೀವ್ ಶುಕ್ಲಾ ಹಾಗೂ ಅನುರಾಗ್ ಠಾಕೂರ್ ಅವರು ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಭಾಗವಹಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್ ರಾಜೀನಾಮೆಗೆ ಎಲ್ಲೆಡೆಯಿಂದಲೂ ಒತ್ತಡ ತೀವ್ರವಾಗಿರುವ ಹಿನ್ನೆಲೆಯಲ್ಲಿ ಇಂದಿನ ಈ ಸಭೆ ಭಾರಿ ಮಹತ್ಪ ಪಡೆದುಕೊಂಡಿದ್ದು, ಶ್ರೀನಿವಾಸನ್ ಪದಚ್ಯುತಿಗೆ ಕ್ಷಣಗಣನೆ ಆರಂಭವಾಗಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.
ಮತ್ತಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.