ADVERTISEMENT

ಬಿಸಿಸಿಐ ಹಣಕಾಸು ಸಮಿತಿಗೆ ವಿನಯ್‌ ಮೃತ್ಯುಂಜಯ ನೇಮಕ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2018, 20:01 IST
Last Updated 1 ಮಾರ್ಚ್ 2018, 20:01 IST
ವಿನಯ್‌ ಮೃತ್ಯುಂಜಯ
ವಿನಯ್‌ ಮೃತ್ಯುಂಜಯ   

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಮಾಧ್ಯಮ ವಕ್ತಾರ ವಿನಯ್‌ ಮೃತ್ಯುಂಜಯ ಅವರನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹಣಕಾಸು ಸಮಿತಿಗೆ ನೇಮಕ ಮಾಡಲಾಗಿದೆ.

ಈ ವಿಷಯವನ್ನು ಬಿಸಿಸಿಐ ಅಧ್ಯಕ್ಷ ಸಿ.ಕೆ.ಖನ್ನಾ, ಗುರುವಾರ ತಿಳಿಸಿದ್ದಾರೆ. ಈ ಹಿಂದೆ ಹುದ್ದೆಯಲ್ಲಿದ್ದ ತಮಿಳುನಾಡು ಕ್ರಿಕೆಟ್‌ ಸಂಸ್ಥೆಯ (ಟಿಎನ್‌ಸಿಎ) ಕಾಶಿ ವಿಶ್ವನಾಥನ್‌ ಅವರು ರಾಜೀನಾಮೆ ನೀಡಿದ್ದಾರೆ. ಅವರಿಂದ ತೆರವಾಗಿರುವ ಸ್ಥಾನಕ್ಕೆ ವಿನಯ್‌ ಅವರನ್ನು ನೇಮಿಸಲಾಗಿದೆ. ಮುಂದಿನ ವಾರ್ಷಿಕ ಸಾಮಾನ್ಯ ಸಭೆಯವರೆಗೂ ವಿನಯ್‌, ಹಣಕಾಸು ಸಮಿತಿಯ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT