ಬೆಂಗಳೂರು: ಉತ್ತಮ ಪ್ರದರ್ಶನ ನೀಡಿದ ಆತಿಥೇಯ ಎಂಎಸ್ಆರ್ಐಟಿ ತಂಡದವರು ಇಲ್ಲಿ ನಡೆಯುತ್ತಿರುವ ಎಂ.ಎಸ್. ರಾಮಯ್ಯ ಸ್ಮಾರಕ ಅಖಿಲ ಭಾರತ ಅಂತರ ಎಂಜಿನಿಯರಿಂಗ್ ಕಾಲೇಜ್ ಬ್ಯಾಸ್ಕೆಟ್ಬಾಲ್ ಟೂರ್ನಿಯ ಬಾಲಕರ ವಿಭಾಗದಲ್ಲಿ ಗೆಲುವು ಪಡೆದರು.
ಶುಕ್ರವಾರ ನಡೆದ ಪಂದ್ಯದಲ್ಲಿ ಎಂಎಸ್ಆರ್ಐಟಿ 34-28 ಪಾಯಿಂಟ್ಗಳಿಂದ ಆರ್ವಿಸಿಇ ತಂಡವನ್ನು ಸೋಲಿಸಿತು. ವಿಜಯಿ ತಂಡ ವಿರಾಮದ ವೇಳೆಗೆ 20-14ರಲ್ಲಿ ಮುನ್ನಡೆಯಲ್ಲಿತ್ತು. ನಂತರ ಗೆಲುವಿನ ಅಂತರ ಹೆಚ್ಚಿಸಿಕೊಂಡಿತು. ಇದೇ ವಿಭಾಗದ ಇನ್ನೊಂದು ಪಂದ್ಯದಲ್ಲಿ ಆರ್ವಿಸಿಇ 45-43ರಲ್ಲಿ ಆರ್ಎನ್ಎಸ್ಐಟಿ ಮೇಲೆ ಗೆದ್ದಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.