ADVERTISEMENT

ಭಾರತ ಟಾಸ್ ಜಯ: ಬ್ಯಾಟಿಂಗ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2011, 9:25 IST
Last Updated 27 ಫೆಬ್ರುವರಿ 2011, 9:25 IST

 ಬೆಂಗಳೂರು: ಹತ್ತನೇ ವಿಶ್ವ ಕಪ್ ಕ್ರಿಕೆಟ್  ‘ಬಿ’ ಗುಂಪಿನ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ. ಭಾರತ ತಂಡದ ನಾಯಕ ಮಹೇಂದ್ರಸಿಂಗ್ ಧೋನಿ ಟಾಸ್ ಜಯದೊಂದಿಗೆ ಬ್ಯಾಟಿಂಗ್‌ನ್ನು ಆಯ್ಕೆ ಮಾಡಿಕೊಂಡಿದ್ದಾರೆ. 


ಎರಡು ತಂಡಗಳು ಅತಿಯಾದ ಆತ್ಮವಿಶ್ವಾಸದಿಂದ ಕ್ರಿಡಾಂಗಣಕ್ಕೆ ಇಳಿದಿವೆ. ಪ್ರಸ್ತುತ ವಿಶ್ವಕಪ್‌ನಲ್ಲಿ ಭಾರತ ಬಾಂಗ್ಲಾದೇಶವನ್ನು ಮಣಿಸಿತ್ತು. ಅದೇ ರೀತಿ ಇಂಗ್ಲೆಂಡ್, ಹಾಲೆಂಡ್‌ನ್ನು ಮಣಿಸಿತ್ತು.

ಭಾರತ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ಶ್ರೀಶಾಂತ್ ಬದಲು ಪಿಯೂಷ್ ಚಾವ್ಲ ಅಂತಿಮ 11 ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT