ನವದೆಹಲಿ: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಸಾಧನೆ ಮಾಡಿದ ಭಾರತದ ಮಹಿಳಾ ಟೇಬಲ್ ಟೆನಿಸ್ ತಂಡದ ಗೆಲುವಿನ ರೂವಾರಿ ಮಣಿಕಾ ಬಾತ್ರಾಗೆ ದೆಹಲಿ ಸರ್ಕಾರ ₹ 14 ಲಕ್ಷ ನಗದು ಬಹುಮಾನ ಪ್ರಕಟಿಸಿದೆ.
ಈ ಕುರಿತು ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿದ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಬಹುಮಾನ ಘೋಷಿಸಿದರು.
‘ಸರ್ಕಾರದ ಕ್ರೀಡಾ ನಿಯಮಗಳ ಅನ್ವಯ ಕಾಮನ್ವೆಲ್ತ್ ಕೂಟದಲ್ಲಿ ಚಿನ್ನ ಗೆದ್ದವರಿಗೆ ₹14 ಲಕ್ಷ, ಬೆಳ್ಳಿಯ ಸಾಧನೆ ಮಾಡಿವರಿಗೆ ₹ 10 ಲಕ್ಷ ಹಾಗೂ ಕಂಚಿನ ಪದಕ ಪಡೆದವರಿಗೆ ₹ 6 ಲಕ್ಷ ಬಹುಮಾನ ನೀಡಲಾಗುವುದು’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.