ಮೈಸೂರು: ಟೆಸ್ಟ್ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಅವರು ಸೋಮವಾರ ಇಲ್ಲಿಯ ಜೆಸಿಇ-ಕೆಎಸ್ಸಿಎ ಮೈದಾನದಲ್ಲಿ ನಡೆಯಲಿರುವ ಶಫಿ ದಾರಾಶಾ ಟ್ರೋಫಿ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಹೈದರಾಬಾದ್ ತಂಡದ ಪರವಾಗಿ ಆಡಲಿದ್ದಾರೆ.
ಶನಿವಾರ ರಾತ್ರಿ ಮೈಸೂರಿಗೆ ಆಗಮಿಸಿರುವ ಲಕ್ಷ್ಮಣ್, ಭಾನುವಾರ ಮಧ್ಯಾಹ್ನ 3ರಿಂದ 5 ಗಂಟೆಯವರೆಗೆ ಗಂಗೋತ್ರಿ ಗ್ಲೇಡ್ಸ್ನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕ್ರಿಕೆಟ್ ತರಬೇತಿ ಅಕಾಡೆಮಿಯ ನೆಟ್ಸ್ನಲ್ಲಿ ಅಭ್ಯಾಸ ನಡೆಸಿದರು.
ತಂಡದ ಕೋಚ್ ಆಗಿರುವ ಕರ್ನಾಟಕದ ಮಾಜಿ ರಣಜಿ ಆಟಗಾರ ಸುನಿಲ್ ಜೋಶಿ ಮತ್ತು ತಂಡದ ಆಟಗಾರರು ಹಾಜರಿದ್ದರು. ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರ ಇಲೆವನ್ ತಂಡವನ್ನು ಹೈದರಾಬಾದ್ ಎದುರಿಸಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.