ADVERTISEMENT

ಮೊದಲ ಏಕದಿನ ಕ್ರಿಕೆಟ್ ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ

ಏಜೆನ್ಸೀಸ್
Published 10 ಡಿಸೆಂಬರ್ 2017, 6:33 IST
Last Updated 10 ಡಿಸೆಂಬರ್ 2017, 6:33 IST
ಮೊದಲ ಏಕದಿನ ಕ್ರಿಕೆಟ್ ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ
ಮೊದಲ ಏಕದಿನ ಕ್ರಿಕೆಟ್ ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ   

ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್‌ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ–ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಶಿಖರ್‌ ಧವನ್‌ ಮತ್ತು ರೋಹಿತ್‌ ಶರ್ಮಾ ವಿಕೆಟ್‌ ಕಳೆದುಕೊಳ್ಳುವ ಮೂಲಕ ಭಾರತ ಆರಂಭಿಕ ಆಘಾತ ಅನುಭವಿಸಿದೆ.

ಆತಿಥೇಯ ಭಾರತ ಗೆಲುವಿನ ಮುನ್ನುಡಿ ಬರೆಯುವ ಕನವರಿಕೆಯಲ್ಲಿದೆ. ಬಲಗೈ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಏಕದಿನ ಮಾದರಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಸಾರಥ್ಯ ವಹಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಈ ಸರಣಿ ಅಗ್ನಿ ಪರೀಕ್ಷೆಯ ಕಣವಾಗಿದೆ. ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ನೀಡಿರುವ ಕಾರಣ ರೋಹಿತ್‌ಗೆ ನಾಯಕತ್ವ ಒಲಿದಿದೆ. ಅವರು ತಂಡವನ್ನು ಮುನ್ನಡೆಸುತ್ತಿರುವ ಭಾರತದ 24ನೇ ಆಟಗಾರ.

ADVERTISEMENT

ಸದ್ಯ ಆಟ ಮುಂದುವರಿಸಿರುವ ಭಾರತ 5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 2 ರನ್‌ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.