ಹುಬ್ಬಳ್ಳಿ : ಕೆಎಸ್ಸಿಎ ಮೈದಾನದಲ್ಲಿ ಪಂಜಾಬ್ ತಂಡದ ಜತೆ ನಡೆದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡವು 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಪಂಜಾಬ್ ತಂಡದ 174ರನ್ಗಳಿಗೆ ಉತ್ತರವಾಗಿ ಕರ್ನಾಟಕ ತಂಡವು 505 ರನ್ಗಳಿಗೆ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿತ್ತು. ಹೀಗಾಗಿ 331ರನ್ಗಳ ಹಿನ್ನಡೆ ಅನುಭವಿಸಿದ್ದ ಪಂಜಾಬ್ ತಂಡವು ಎರಡನೇ ಇನ್ನಿಂಗ್ಸ್ನಲ್ಲಿ ಗಳಿಸಿದ್ದು ಕೇವಲ 361ರನ್ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಕರ್ನಾಟಕ ತಂಡಕ್ಕೆ ಗೆಲ್ಲಲು ಎರಡನೇ ಇನ್ನಿಂಗ್ಸ್ನಲ್ಲಿ ದೊರೆತಿದ್ದು ಬರೀ 30 ರನ್ಗಳು ಮಾತ್ರ.
ರಾಜ್ಯದ ತಂಡವು ವಿಕೆಟ್ ನಷ್ಟವಿಲ್ಲದೆ ಸುಲಭದ ಗುರಿ ಬೆನ್ನತ್ತಿ ಜಯ ಸಾಧಿಸಿತು. ರಾಹುಲ್ 25 ಮತ್ತು ಅಗರ್ವಾಲ್ 8 ರನ್ ಗಳಿಸುವ ಮೂಲಕ ತಂಡಕ್ಕೆ ಜಯ ತಂದುಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.