ADVERTISEMENT

ರಣಜಿ ಪಂದ್ಯಕ್ಕೆ ಶಿವಮೊಗ್ಗ ಸಜ್ಜು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2017, 19:30 IST
Last Updated 19 ಅಕ್ಟೋಬರ್ 2017, 19:30 IST

ಶಿವಮೊಗ್ಗ: ನಗರದ ನವುಲೆ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯ ಆಯೋಜಿಸಲಾಗಿದೆ. ಅ. 24 ರಿಂದ ನಡೆಯುವ ನಾಲ್ಕು ದಿನಗಳ ಪಂದ್ಯದಲ್ಲಿ ಕರ್ನಾಟಕ, ಹೈದರಾಬಾದ್‌ ತಂಡವನ್ನು ಎದುರಿಸಲಿದ್ದು, ಇದಕ್ಕಾಗಿ ಹೊಸ ಕ್ರೀಡಾಂಗಣ ಸಜ್ಜುಗೊಂಡಿದೆ.

ಈಗಾಗಲೇ ಶಿವಮೊಗ್ಗ ನಗರ ಮತ್ತು ಜಿಲ್ಲೆಯ ವಿವಿಧ ಕ್ರೀಡಾಂಗಣಗಳಲ್ಲಿ ರಣಜಿ ಸೇರಿದಂತೆ ಕೆಲವು ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳು ನಡೆದಿದ್ದರೂ, ಕೆಎಸ್‌ಸಿಎ ನಿಂದ ನಿರ್ಮಿಸಿರುವ ಈ ಕ್ರೀಡಾಂಗಣದಲ್ಲಿ ಇದೆ ಮೊದಲ ಬಾರಿಗೆ ಪಂದ್ಯ ನಡೆಯುತ್ತಿದೆ. ಈ ನೂತನ ಕ್ರೀಡಾಂಗಣವು ರಣಜಿ ಆರಂಭದ ದಿನವೇ ಉದ್ಘಾಟನೆಯಾಗುತ್ತಿದೆ ಎಂದು ಶಿವಮೊಗ್ಗ ವಲಯ ಸಂಚಾಲಕ ಡಿ.ಆರ್. ನಾಗರಾಜ್‌ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಉಚಿತ ಪ್ರವೇಶ: ಪಂದ್ಯ ಪ್ರತಿದಿನ ಬೆಳಿಗ್ಗೆ 9.30ರಿಂ ದ ಸಂಜೆ 4.30ರವರೆಗೆ ನಡೆಯಲಿದ್ದು, ಕ್ರಿಕೆಟ್‌ಪ್ರಿಯರಿಗೆ ಉಚಿತ ಪ್ರವೇಶವಿದೆ.

ADVERTISEMENT

ಸಕಲ ಸಿದ್ಧತೆ: ವೀಕ್ಷಕರಿಗೆ ಕ್ರೀಡಾಂಗಣದ ಸುತ್ತಲೂ ಹುಲ್ಲುಹಾಸಿನ ಮೇಲೆ ಕೂರುವ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ವಲಯದ ಅಧ್ಯಕ್ಷ ಸುಕುಮಾರ್ ಪಟೇಲ್ ವಿವರ ನೀಡಿದರು. ವೀಕ್ಷಕರಿಗೆ 2 ದ್ವಾರಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಮೊದಲ ದ್ವಾರದ ಮೂಲಕ ಸಾರ್ವಜ
ನಿಕರು ಹಾಗೂ ಮತ್ತೊಂದು ದ್ವಾರದ ಮೂಲಕ ಆಹ್ವಾನಿತರಿಗೆ ಅವಕಾಶ ಕಲ್ಪಿಸಲಾಗಿದೆ. ದ್ವಿಚಕ್ರ ಹಾಗೂ ನಾಲ್ಕುಚಕ್ರದ ವಾಹನಗಳಿಗೆ ಪ್ರತ್ಯೇಕ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.