ನವದೆಹಲಿ (ಪಿಟಿಐ): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಯು ಸೊಮವಾರ ರಾಜಸ್ಥಾನ್ ರಾಯಲ್ಸ್ನ ಸಹ ಮಾಲೀಕ ರಾಜ್ಕುಂದ್ರಾ ಅವರನ್ನು ಅಮಾನತುಗೊಳಿಸಿದೆ.
ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಕುಂದ್ರ ಅವರನ್ನು ರಾಜಸ್ಥಾನ್ ರಾಯಲ್ಸ್ ಪ್ರಾಂಚೈಸಿಯಿಂದ ಅಮಾನತು ಮಾಡಲಾಗಿದೆ ಎಂದು ಬಿಸಿಸಿಐನ ಉಪಾಧ್ಯಕ್ಷ ಚಿತ್ರಕಾ ಮಿಶ್ರಾ ತಿಳಿಸಿದ್ದಾರೆ.
ರಾಜ್ಕುಂದ್ರಾ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದ ಸಂದರ್ಭದಲ್ಲಿ ಬೆಟ್ಟಿಂಗ್ ನಡೆಸಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಮಾನತುಗೊಳಿಸಿರುವುದಾಗಿ ಬಿಸಿಸಿಐ ತಿಳಿಸಿದೆ.
ಈ ಮೂಲಕ ಬಿಬಿಸಿಐ ಬೆಟ್ಟಿಂಗ್ ನಡೆಸುವವರಿಗೂ ಬಿಸಿ ಮುಟ್ಟಿಸಿದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.