ನವದೆಹಲಿ (ಪಿಟಿಐ): ಟ್ರಿಪಲ್ ಜಂಪ್ ಸ್ಪರ್ಧಿ ರೆಂಜಿತ್ ಮಹೇಶ್ವರಿ ಅವರಿಗೆ ಅರ್ಜುನ ಪ್ರಶಸ್ತಿ ನೀಡಬೇಕೇ ಎಂಬುದರ ಬಗ್ಗೆ ಕ್ರೀಡಾ ಇಲಾಖೆ ಬುಧವಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ರೆಂಜಿತ್ಗೆ ಸಂಬಂಧಿಸಿದ ವರದಿಯನ್ನು ಭಾರತ ಅಥ್ಲೆಟಿಕ್ ಫೆಡರೇಷನ್ ಸೋಮವಾರ ರಾತ್ರಿ ಕ್ರೀಡಾ ಇಲಾಖೆಗೆ ಸಲ್ಲಿಸಿತ್ತು.
ರೆಂಜಿತ್ ವಿರುದ್ಧ ಉದ್ದೀಪನಾ ಮದ್ದು ಸೇವನೆಯ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಎಎಫ್ಐ ತನ್ನ ವರದಿಯಲ್ಲಿ ತಿಳಿಸಿದೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.