ADVERTISEMENT

ವಾಲಿಬಾಲ್ ಕೋಚ್ ಮಾದೇಗೌಡ ನಿಧನ

​ಪ್ರಜಾವಾಣಿ ವಾರ್ತೆ
Published 13 ಮೇ 2018, 19:30 IST
Last Updated 13 ಮೇ 2018, 19:30 IST
ಎಂ.ಎಸ್‌.ಮಾದೇಗೌಡ
ಎಂ.ಎಸ್‌.ಮಾದೇಗೌಡ   

ಮಂಡ್ಯ:  ಅಂತರರಾಷ್ಟ್ರೀಯ ಮಟ್ಟದ ವಾಲಿಬಾಲ್ ಕೋಚ್‌,  ಮಂಡ್ಯದ ಹೊಸಹಳ್ಳಿ ಬಡಾವಣೆ ನಿವಾಸಿ ಎಂ.ಎಸ್‌.ಮಾದೇಗೌಡ (68) ಅವರು ಭಾನುವಾರ ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಗಂಡುಮಕ್ಕಳು ಇದ್ದಾರೆ. ಮೈಷುಗರ್‌ ಸಕ್ಕರೆ ಕಾರ್ಖಾನೆಯಲ್ಲಿ ಕ್ರೀಡಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ರಾಷ್ಟ್ರಮಟ್ಟದ ವಾಲಿಬಾಲ್‌ ಟೂರ್ನಿಗಳಲ್ಲಿ ಆಡಿದ್ದ ಅವರು, ಹಲವು ಬಾರಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ತಂಡಗಳಿಗೆ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು.

ರಾಜ್ಯ ವಾಲಿಬಾಲ್‌ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿ, ವ್ಯವಸ್ಥಾಪಕರಾಗಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಪಾಂಡವಪುರ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.  (ಸಂಪರ್ಕ ಮೊಬೈಲ್: 9108162999).

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.