ADVERTISEMENT

ವಿರಾಟ್ ಕೊಹ್ಲಿ ಆಯ್ಕೆ ಮಾಡಿದ್ದಕ್ಕೆ ‘ಶಿಕ್ಷೆ’

ಪಿಟಿಐ
Published 8 ಮಾರ್ಚ್ 2018, 19:30 IST
Last Updated 8 ಮಾರ್ಚ್ 2018, 19:30 IST
ವಿರಾಟ್ ಕೊಹ್ಲಿ (ಸಂಗ್ರಹ ಚಿತ್ರ).
ವಿರಾಟ್ ಕೊಹ್ಲಿ (ಸಂಗ್ರಹ ಚಿತ್ರ).   

ಮುಂಬೈ: ತಮಿಳುನಾಡಿನ ಎಸ್‌.ಬದ್ರಿನಾಥ್ ಅವರ ಬದಲು ವಿರಾಟ್ ಕೊಹ್ಲಿ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದಕ್ಕೆ ಭಾರಿ ಬೆಲೆ ತೆರಬೇಕಾಗಿತ್ತು ಎಂದು ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದ ದಿಲೀಪ್ ವೆಂಗ್‌ಸರ್ಕಾರ್‌ ಹೇಳಿದರು.

‘2008ರಲ್ಲಿ ಕೊಹ್ಲಿ ಅವರನ್ನು ಆಯ್ಕೆ ಮಾಡಿದ್ದಕ್ಕೆ ಅಂದಿನ ಬಿಸಿಸಿಐ ಕಾರ್ಯದರ್ಶಿ ಎನ್.ಶ್ರೀನಿವಾಸನ್‌ ಕೋಪಿಸಿಕೊಂಡಿದ್ದರು.

ಇದು ನನ್ನ ಅಧ್ಯಕ್ಷ ಸ್ಥಾನಕ್ಕೇ ಕುತ್ತು ತಂದಿತು. ಶ್ರೀಕಾಂತ್ ಅವರ ಹೆಗಲಿಗೆ ಆಯ್ಕೆಯ ಸಮಿತಿ ಅಧ್ಯಕ್ಷ ಸ್ಥಾನವನ್ನು ಹೊರಿಸಲಾಯಿತು’ ಎಂದು ಅವರು ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.