ಮುಂಬೈ: ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಮಗ ಅರ್ಜುನ್ ತೆಂಡೂಲ್ಕರ್ ಶುಕ್ರವಾರ ವಾಂಖೆಡೆ ಕ್ರೀಡಾಂಗಣದ ನೆಟ್ನಲ್ಲಿ ಅಭ್ಯಾಸ ನಡೆಸುತ್ತಿದ್ದ ವಿರಾಟ್ ಕೊಹ್ಲಿ ಪಡೆಯ ಆಟಗಾರರಿಗೆ ಬೌಲಿಂಗ್ ಮಾಡುವ ಮೂಲಕ ಗಮನಸೆಳೆದರು.
ಭಾರತ ತಂಡದ ಮುಖ್ಯ ಕೋಚ್ ರವಿ ಶಾಸ್ತ್ರಿ ಹಾಗೂ ಬೌಲಿಂಗ್ ಕೋಚ್ ಭರತ್ ಅರುಣ್ ಕೂಡ ಈ ಸಂದರ್ಭದಲ್ಲಿ ಅಂಗಳದಲ್ಲಿ ಇದ್ದರು. ಅಭ್ಯಾಸದ ವೇಳೆ ಅವರು ಅರ್ಜುನ್ಗೆ ಬೌಲಿಂಗ್ ಮಾಡುವ ಕೆಲವು ತಂತ್ರ ಗಳನ್ನು ಹೇಳಿಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.