ಬರ್ಮಿಂಗ್ಹ್ಯಾಮ್: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಬಳಿಕ ಜೂನ್ 23ರಿಂದ ಭಾರತ– ವೆಸ್ಟ್ ಇಂಡೀಸ್ ನಡುವೆ 5 ಏಕದಿನ ಹಾಗೂ 1 ಟಿ–20 ಪಂದ್ಯದ ಕ್ರಿಕೆಟ್ ಸರಣಿ ಆರಂಭವಾಗಲಿದೆ.
ಈ ಸರಣಿಗೆ ಟೀಂ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬೂಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಸ್ಥಾನಕ್ಕೆ ಯುವ ಆಟಗಾರರಾದ ರಿಷಬ್ ಪಂತ್ ಹಾಗೂ ಚೀನಾಮನ್ ಕುಲದೀಪ್ ಯಾದವ್ಗೆ ಅವಕಾಶ ನೀಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿಯ ಅಧ್ಯಕ್ಷ ಎಂ.ಎಸ್.ಕೆ ಪ್ರಸಾದ್ ತಿಳಿಸಿದ್ದಾರೆ.
ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ಜತೆಗೆ ರಹಾನೆ ಅಥವಾ ರಿಷಬ್ ಪಂತ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಭಾರತ ತಂಡ: ವಿರಾಟ್ ಕೊಹ್ಲಿ, ಶಿಖರ್ ಧವನ್, ರಿಷಬ್ ಪಂತ್, ರಹಾನೆ, ಎಂ.ಎಸ್.ದೋನಿ, ಯುವರಾಜ್ ಸಿಂಗ್, ಕೇದಾರ್ ಜಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಆರ್.ಅಶ್ವಿನ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.