ADVERTISEMENT

ಶಿಖರ್‌ ಭರ್ಜರಿ ಬ್ಯಾಟಿಂಗ್‌: ಶ್ರೀಲಂಕಾ ಗೆಲುವಿಗೆ 175 ರನ್‌ ಗುರಿ ನೀಡಿದ ಭಾರತ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2018, 15:56 IST
Last Updated 6 ಮಾರ್ಚ್ 2018, 15:56 IST
ಶಿಖರ್ ಧವನ್‌
ಶಿಖರ್ ಧವನ್‌   

ಕೊಲಂಬೊ: ಇಲ್ಲಿ ನಡೆಯುತ್ತಿರುವ ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳನ್ನು ಒಳಗೊಂಡ ‘ನಿದಾಸ್‌’ ಕಪ್‌ ತ್ರಿಕೋನ ಟ್ವೆಂಟಿ–20 ಸರಣಿಯ ಮೊದಲ ಪಂದ್ಯದಲ್ಲಿ ‘ಯುವ ಭಾರತ’ ತಂಡ ಶ್ರೀಲಂಕಾ ತಂಡದ ಗೆಲುವಿಗೆ 175 ರನ್‌ ಗುರಿ ನೀಡಿದೆ.

ಭಾರತದ ಎದುರು ಟಾಸ್‌ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್‌ ಆರಂಭಿಸಿದ ಭಾರತ ರೋಹಿತ್‌ ಶರ್ಮಾ(0) ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು. ಆದರೆ ಶಿಖರ್‌ ಧವನ್‌ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ  5 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿದೆ.

ಸದ್ಯ ಬ್ಯಾಟಿಂಗ್‌ ಆರಂಭಿಸಿರುವ ಶ್ರೀಲಂಕಾ 6 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 75 ರನ್‌ ಗಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.