ADVERTISEMENT

ಶ್ರೀಲಂಕಾಕ್ಕೆ ಭಾರತ ತಂಡ

ಪಿಟಿಐ
Published 4 ಮಾರ್ಚ್ 2018, 19:30 IST
Last Updated 4 ಮಾರ್ಚ್ 2018, 19:30 IST
ರೋಹಿತ್ ಶರ್ಮಾ
ರೋಹಿತ್ ಶರ್ಮಾ   

ಮುಂಬೈ: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ನಿದಾಸ್ ಟ್ರೋಫಿಯಲ್ಲಿ ಆಡಲು ಭಾನುವಾರ ಶ್ರೀಲಂಕಾಕ್ಕೆ ಪ್ರಯಾಣ ಮಾಡಿದೆ. ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ದೋನಿ ಅವರಿಗೆ ಈ ಟೂರ್ನಿಯಲ್ಲಿ ವಿಶ್ರಾಂತಿ ನೀಡಲಾಗಿದೆ. ಮೂರು ತಂಡಗಳು ಪರಸ್ಪರ ಎರಡು ಪಂದ್ಯ ಆಡಲಿವೆ.

ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್‌ (ಉಪನಾಯಕ), ಕೆ.ಎಲ್.ರಾಹುಲ್‌, ಸುರೇಶ್ ರೈನಾ, ಮನೀಷ್ ಪಾಂಡೆ, ದಿನೇಶ್ ಕಾರ್ತಿಕ್‌ (ವಿಕೆಟ್ ಕೀಪರ್‌), ದೀಪಕ್ ಹೂಡ, ವಾಷಿಂಗ್ಟನ್‌ ಸುಂದರ್‌, ಯಜುವೇಂದ್ರ ಚಾಹಲ್‌, ಅಕ್ಷರ್‌ ಪಟೇಲ್‌, ವಿಜಯ್‌ ಶಂಕರ್‌, ಶಾರ್ದೂಲ್ ಠಾಕೂರ್‌, ಜಯದೇವ್ ಉನದ್ಕತ್‌, ಮಹಮ್ಮದ್ ಸಿರಾಜ್‌, ರಿಷಭ್ ಪಂತ್‌ (ವಿಕೆಟ್ ಕೀಪರ್‌).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT