ಜೈಪುರ (ಪಿಟಿಐ): `ರಾಜಸ್ತಾನ ರಾಯಲ್ಸ್ ತಂಡದ ಬೌಲರ್ ಶ್ರೀಶಾಂತ್ ಈಗ ಉತ್ತಮ ಫಾರ್ಮ್ನಲ್ಲಿದ್ದಾರೆ. ಟೂರ್ನಿಯಲ್ಲಿ ಬೌಲಿಂಗ್ ಮಾಡಲು ಅವರು ಸಿದ್ಧರಾಗಿದ್ದಾರೆ'. ಹೀಗೆಂದು ರಾಯಲ್ಸ್ ತಂಡದ ಬ್ಯಾಟ್ಸ್ಮನ್ ಓವೇಸ್ ಷಾ ಶನಿವಾರ ಇಲ್ಲಿ ಹೇಳಿದರು.
2008ರ `ಕೆನ್ನೆಗೆ ಹೊಡೆದ ಪ್ರಕರಣ'ವನ್ನು ಕೆದಕಿ ಮತ್ತೆ ವಿವಾದಕ್ಕೆ ಗುರಿಯಾಗಿದ್ದ ಶ್ರೀಶಾಂತ್, ಭಾನುವಾರ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆಡಲು ಮಾನಸಿಕವಾಗಿ ಸಿದ್ಧರಾಗಿದ್ದಾರಾ ಎಂದು ಸುದ್ದಿಗಾರರು ಷಾ ಅವರನ್ನು ಕೇಳಿದರು. ಇದಕ್ಕೆ ಉತ್ತರಿಸಿದ ಷಾ, `ಶ್ರೀಶಾಂತ್ ಬಗ್ಗೆ ಜನ ಈ ರೀತಿ ಆಲೋಚಿಸುತ್ತಾರೆ ಎಂದರೆ ಆಶ್ಚರ್ಯವಾಗುತ್ತದೆ. ಅವರು ಒಬ್ಬ ವೃತ್ತಿಪರ ಕ್ರಿಕೆಟಿಗ. ನೆಟ್ನಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಚೆನ್ನಾಗಿ ಬೌಲಿಂಗ್ ಮಾಡುತ್ತಿದ್ದಾರೆ' ಎಂದು ಹೇಳಿದರು.
ಒಂದು ವೇಳೆ ತಂಡಕ್ಕೆ ಆಯ್ಕೆಯಾದರೆ ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ' ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.