ADVERTISEMENT

‘ಶ್ರೇಷ್ಠ ಆಟ ಆಡುವತ್ತ ಚಿತ್ತ ನೆಟ್ಟಿದ್ದೇನೆ’

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2017, 19:38 IST
Last Updated 7 ಅಕ್ಟೋಬರ್ 2017, 19:38 IST
‘ಶ್ರೇಷ್ಠ ಆಟ ಆಡುವತ್ತ ಚಿತ್ತ ನೆಟ್ಟಿದ್ದೇನೆ’
‘ಶ್ರೇಷ್ಠ ಆಟ ಆಡುವತ್ತ ಚಿತ್ತ ನೆಟ್ಟಿದ್ದೇನೆ’   

ಬೆಂಗಳೂರು: ‘ಕೆ.ತಿಮ್ಮಪ್ಪಯ್ಯ, ಶಫಿ ದಾರಾಷಾ ಸೇರಿದಂತೆ ಹಲವು ಟೂರ್ನಿಗಳಲ್ಲಿ ಶ್ರೇಷ್ಠ ಆಟ ಆಡಿದ್ದೆ. ಹೀಗಾಗಿ ರಣಜಿ ತಂಡಕ್ಕೆ ಆಯ್ಕೆಯಾಗುವ ವಿಶ್ವಾಸ ಇತ್ತು. ಈ ಬಾರಿ ಸ್ಥಾನ ಸಿಕ್ಕಿರುವುದರಿಂದ ತುಂಬಾ ಖುಷಿಯಾಗಿದೆ. ಸಿಕ್ಕ ಅವಕಾಶದಲ್ಲಿ ಉತ್ತಮ ಆಟ ಆಡಿ ತಂಡದ ಗೆಲುವಿಗಾಗಿ ಪ್ರಯತ್ನಿಸುತ್ತೇನೆ’ ಎಂದು ಅಭಿಷೇಕ್‌ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಈ ಬಾರಿ ಹೊಸ ಕೋಚ್‌ಗಳ ಮಾರ್ಗದರ್ಶನದಲ್ಲಿ ವಿಶೇಷ ತರಬೇತಿ ಪಡೆದಿದ್ದೇವೆ. ಅಭ್ಯಾಸ ಪಂದ್ಯಗಳಲ್ಲಿ 94 ಮತ್ತು 40 ರನ್‌ ಗಳಿಸಿದ್ದರಿಂದ ವಿಶ್ವಾಸ ಹೆಚ್ಚಿದೆ. ಅಸ್ಸಾಂ ವಿರುದ್ಧದ ಮೊದಲ ಪಂದ್ಯದಲ್ಲಿ ಶತಕ ಗಳಿಸಬೇಕೆಂಬ ಗುರಿ ಇಟ್ಟುಕೊಂಡಿದ್ದೇನೆ. ಈ ನಿಟ್ಟಿನಲ್ಲಿ ಇನ್ನಷ್ಟು ಸಿದ್ಧತೆಗಳನ್ನು ಮಾಡಿಕೊಂಡು ಅಂಗಳಕ್ಕಿಳಿಯುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT