ADVERTISEMENT

ಸಂಭವನೀಯರ ಸ್ಯಾಂಪಲ್ ಪಡೆದ ನಾಡಾ

​ಪ್ರಜಾವಾಣಿ ವಾರ್ತೆ
Published 12 ಜನವರಿ 2012, 19:30 IST
Last Updated 12 ಜನವರಿ 2012, 19:30 IST

ಬೆಂಗಳೂರು: ಲಂಡನ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಭಾರತದ ಬ್ಯಾಡ್ಮಿಂಟನ್ ತಂಡದ ಸಂಭವನೀಯರ ಮೂತ್ರದ ಸ್ಯಾಂಪಲ್ ಅನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (ನಾಡಾ) ಪಡೆದುಕೊಂಡಿದೆ.

`ನಾಡಾ ಅಧಿಕಾರಿಗಳು ನಗರದಲ್ಲಿರುವ ಟಾಟಾ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಗೆ ಇತ್ತೀಚೆಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಒಲಿಂಪಿಕ್ ಸಂಭವನೀಯರ ಮೂತ್ರದ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗಾಗಿ ತೆಗೆದುಕೊಂಡು ಹೋಗಿದ್ದಾರೆ~ ಎಂದು 76ನೇ ರಾಷ್ಟ್ರೀಯ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಟೂರ್ನಿ ನಿರ್ದೇಶಕರಾದ ಯು. ವಿಮಲ್ ಕುಮಾರ್ ತಿಳಿಸಿದ್ದಾರೆ.

ಅರವಿಂದ್ ಭಟ್, ಅನೂಪ್ ಶ್ರೀಧರ್, ಆದಿತ್ಯ ಪ್ರಕಾಶ್ ಅವರ ಸ್ಯಾಂಪಲ್ ಅನ್ನು ನಾಡಾ ಅಧಿಕಾರಿಗಳು ಪಡೆದಿದ್ದಾರೆಂದು ವಿಮಲ್ ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.