ADVERTISEMENT

ಸರಣಿ ಜಯದ ಭರವಸೆ

ಎಂ.ಮಹೇಶ
Published 13 ಡಿಸೆಂಬರ್ 2017, 19:30 IST
Last Updated 13 ಡಿಸೆಂಬರ್ 2017, 19:30 IST
ಇಲ್ಲಿನ ಕೆ.ಎಸ್‌.ಸಿ.ಎ. ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು ಎರಡೂ ತಂಡಗಳ ಅಟಗಾರ್ತಿಯರು ಬುಧವಾರ ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದರು. ಪ್ರಜಾವಾಣಿ ಚಿತ್ರ
ಇಲ್ಲಿನ ಕೆ.ಎಸ್‌.ಸಿ.ಎ. ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು ಎರಡೂ ತಂಡಗಳ ಅಟಗಾರ್ತಿಯರು ಬುಧವಾರ ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದರು. ಪ್ರಜಾವಾಣಿ ಚಿತ್ರ   

ಬೆಳಗಾವಿ: ಮೊದಲ ಪಂದ್ಯದಲ್ಲಿ ಸುಲಭವಾಗಿ ಗೆಲುವು ಸಾಧಿಸಿರುವ ಭಾರತ ಮಹಿಳಾ ‘ಎ’ ತಂಡದವರು ಮತ್ತೊಂದು ಜಯದ ಭರವಸೆಯಲ್ಲಿದ್ದಾರೆ. ಬಾಂಗ್ಲಾದೇಶ ಮಹಿಳಾ ‘ಎ’ ತಂಡದ ವಿರುದ್ಧ ಗುರುವಾರ ನಡೆಯಲಿರುವ ಟ್ವೆಂಟಿ–20 ಕ್ರಿಕೆಟ್‌ ಪಂದ್ಯದಲ್ಲಿ ಗೆದ್ದು ಸರಣಿಯನ್ನು ತಮ್ಮದಾಗಿಸಿಕೊಳ್ಳುವ ವಿಶ್ವಾಸ ತಂಡದ್ದು.

ಇಲ್ಲಿನ ಕೆ.ಎಸ್‌.ಸಿ.ಎ. ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು ಎರಡೂ ತಂಡಗಳ ಅಟಗಾರ್ತಿಯರು ಬುಧವಾರ ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದರು.

ಮೂರು ಪಂದ್ಯಗಳ ಟ್ವೆಂಟಿ–20 ಸರಣಿಯ ಮೊದಲ ಪಂದ್ಯ ಎರಡು ದಿನಗಳ ಹಿಂದೆ ನಡೆದಿತ್ತು. ಆ ಪಂದ್ಯವನ್ನು ಭಾರತ ಎಂಟು ವಿಕೆಟ್‌ಗಳಿಂದ ಗೆದ್ದಿತ್ತು. ಮೊದಲ ಪಂದ್ಯದಲ್ಲಿ ಉತ್ತಮ ಸಾಮರ್ಥ್ಯ ತೋರಿದ ಎಸ್‌. ಮೇಘನಾ ಹಾಗೂ ಕರ್ನಾಟಕದ ವಿ.ಆರ್‌. ವನಿತಾ ಅವರು ತಂಡದ ಬ್ಯಾಟಿಂಗ್‌ ವಿಭಾಗದ ಭರವಸೆ ಎನಿಸಿದ್ದಾರೆ.

ADVERTISEMENT

ಇನ್ನೊಂದೆಡೆ, ಸರಣಿ ಜಯದ ಆಸೆ ಜೀವಂತವಾಗಿ ಉಳಿಸಿಕೊಳ್ಳಲು ಗುರುವಾರದ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಸ್ಥಿತಿಯಲ್ಲಿ ಪ್ರವಾಸಿ ತಂಡದವರಿದ್ದಾರೆ. ಇದಕ್ಕಾಗಿ ಅವರು ಎರಡೂ ದಿನ ನೆಟ್ಸ್‌ನಲ್ಲಿ ಬ್ಯಾಟಿಂಗ್‌, ಬೌಲಿಂಗ್‌ ಅಭ್ಯಾಸ ನಡೆಸಿದರು.

ಪಂದ್ಯ ಆರಂಭ: ಬೆಳಿಗ್ಗೆ 9.30ಕ್ಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.