ADVERTISEMENT

ಸುನಿಲ್ ಮೇಲೆ ಹೆಚ್ಚು ಒತ್ತಡ: ಮಾರ್ಗನ್

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2013, 19:59 IST
Last Updated 13 ಏಪ್ರಿಲ್ 2013, 19:59 IST

ಕೋಲ್ಕತ್ತ (ಪಿಟಿಐ): ಆಡಿದ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಸೋತು ಚಿಂತೆಗೀಡಾಗಿರುವ ಕೋಲ್ಕತ್ತ ನೈಟ್ ರೈಡರ್ಸ್, ಗೆಲುವಿನ ಹಾದಿಗೆ ಮರಳಲು ಸ್ಪಿನ್ನರ್ ಸುನಿಲ್ ನಾರಾಯಣ್ ಅವರನ್ನು ಹೆಚ್ಚು ಅವಲಂಬಿಸಿದೆ.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಕೆಆರ್ ಬ್ಯಾಟ್ಸ್‌ಮನ್ ಇಯಾನ್ ಮೋರ್ಗನ್, `ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರ ನಡೆಯುವ ಪಂದ್ಯದಲ್ಲಿ ಸುನಿಲ್ ನಾರಾಯಣ್ ಮೇಲೆ ಹೆಚ್ಚು ನಿರೀಕ್ಷೆ ಹೊಂದಿದ್ದೇವೆ. ಅವರು ತಂಡಕ್ಕೆ ಆಶಾಕಿರಣ.

ಪಂದ್ಯ ಗೆದ್ದುಕೊಡುವ ಶಕ್ತಿಯನ್ನು ಅವರು ಹೊಂದಿದ್ದಾರೆ. ತಂಡ ಸೋಲುತ್ತಿದ್ದರೂ ಸುನಿಲ್ ಚೆನ್ನಾಗಿ ಬೌಲಿಂಗ್ ಮಾಡುವುದನ್ನು ನೋಡಲು ಸಂತಸವಾಗುತ್ತದೆ' ಎಂದು ಹೇಳಿದರು.

ಇದೇ ವೇಳೆ, `ಸತತ ಸೋಲಿನಿಂದ ತಂಡ ಚಿಂತೆಗೀಡಾಗಿಲ್ಲ. ಕಳೆದ ಬಾರಿಯ ಟೂರ್ನಿಯಲ್ಲೂ ಇದೇ ರೀತಿಯ ಪರಿಸ್ಥಿತಿಯಲ್ಲಿದ್ದ ತಂಡ, ನಂತರ ಚೇತರಿಸಿಕೊಂಡಿತ್ತು. ಈ ಬಾರಿಯೂ ಗೆಲುವಿನ ಹಾದಿಗೆ ತಂಡ ಮರಳಲಿದೆ. ಭಾನುವಾರದ ಪಂದ್ಯದಿಂದಲೇ ನಮ್ಮ ಗೆಲುವಿನ ಅಭಿಯಾನ ಮತ್ತೆ ಆರಂಭವಾಗಬಹುದು' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.