ನವದೆಹಲಿ (ಐಎಎನ್ಎಸ್): ಭಾರತ ಹಾಕಿ ತಂಡ ತವರಿನಲ್ಲಿ ನಡೆಯುತ್ತಿರುವ ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರಿದ್ದು , ಇದರ ಹೊಣೆಯನ್ನು ತಾವು ಹೊರುವುದಾಗಿ ಹಾಕಿ ಇಂಡಿಯಾದ (ಹೆಚ್ಐ) ಪ್ರಧಾನ ಕಾರ್ಯದರ್ಶಿ ನರೀಂದರ್ ಬಾತ್ರಾ ಹೇಳಿದ್ದಾರೆ.
‘ಜೂನಿಯರ್ ಹಾಕಿ ತಂಡದ ನೀರಸ ಪ್ರದರ್ಶನದ ಸಂಪೂರ್ಣ ಹೊಣೆಯನ್ನು ನಾನೇ ಹೊರಲಿದ್ದೇನೆ. ದಯವಿಟ್ಟು ತಂಡದ ಆಟಗಾರರು ಮತ್ತು ಸಿಬ್ಬಂದಿಯನ್ನು ಯಾರೂ ದೂರಬೇಡಿ. ಹಾಕಿ ಇಂಡಿಯಾದ ಸಂಪೂರ್ಣ ಜವಾಬ್ದಾರಿ ನನ್ನದಾಗಿರುವುದರಿಂದ ಈ ಬಗ್ಗೆ ನಾನು ದೇಶದ ಹಾಕಿ ಪ್ರೇಮಿಗಳು, ಕ್ರೀಡಾ ಸಚಿವಾಲಯ ಮತ್ತು ಕ್ರೀಡಾ ಪ್ರಾಧಿಕಾರಗಳ ಕ್ಷಮೆ ಕೋರುತ್ತೇನೆ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.