ಬೆಂಗಳೂರು: ಹುಬ್ಬಳ್ಳಿಯ ಸೌತ್ ವೆಸ್ಟರ್ನ್ ರೈಲ್ವೆ ತಂಡ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಶ್ರಯದ `ಎ~ ಡಿವಿಷನ್ ಹಾಕಿ ಲೀಗ್ ಚಾಂಪಿಯನ್ಷಿಪ್ನಲ್ಲಿ ಪ್ರಯಾಸದ ಜಯ ಪಡೆದು ಪೂರ್ಣ ಪಾಯಿಂಟ್ಸ್ ಸಂಗ್ರಹಿಸಿದರು.
ಅಕ್ಕಿತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಸೌತ್ ವೆಸ್ಟರ್ನ್ ರೈಲೆ ತಂಡ 1-0 ಗೋಲಿನಿಂದ ಬೆಂಗಳೂರಿನ ರೈಲ್ವೆ ಗಾಲಿ ಕಾರ್ಖಾನೆ ತಂಡದ ಮೇಲೆ ವಿಜಯ ಸಾಧಿಸಿತು. ಪೂರ್ವಾರ್ಧದ 28ನೇ ನಿಮಿಷದಲ್ಲಿ ರವಿ ಮುತಗಾರ್ ಚೆಂಡನ್ನು ಗುರಿಮುಟ್ಟಿಸಿ ತಮ್ಮ ತಂಡದ ಗೆಲುವಿನ ರೂವಾರಿ ಆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.