ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2017ನೇ ಸಾಲಿನ ಏಕಲವ್ಯ ಪ್ರಶಸ್ತಿ ಪ್ರಕಟಿಸಿದೆ.
13 ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಲಾಗಿದೆ. ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಏಕಲವ್ಯ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದರು.
ಸಾಧಕರಿಗೆ 2 ಲಕ್ಷ ರೂಪಾಯಿ ನಗದು ಹಾಗೂ ಏಕಲವ್ಯ ಕಂಚಿನ ಪ್ರತಿಮೆ ನೀಡಲಾಗುವುದು.
ವಿಜೇತರು: ಹರ್ಷಿತ ಎಸ್(ಅಥ್ಲೆಟಿಕ್), ರಾಜೇಶ್ ಪ್ರಕಾಶ್ ಉಪ್ಪಾರ್(ಬ್ಯಾಸ್ಕೇಟ್ ಬಾಲ್), ಪೂರ್ವಿಶ್ ಎಸ್ ರಾಮ್(ಬ್ಯಾಡ್ಮಿಂಟನ್), ರೇಣುಕಾ ದಂಡಿನ್(ಸೈಕ್ಲಿಂಗ್), ಮಯೂರ್ ಡಿ ಭಾನು(ಶೂಟಿಂಗ್), ಕಾರ್ತಿಕ್ ಎ(ವಾಲಿಬಾಲ್), ಮಾಳವಿಕ ವಿಶ್ವನಾಥ್(ಈಜು), ಕೀರ್ತನಾ ಟಿ.ಕೆ(ರೋಯಿಂಗ್), ಅಯ್ಯಪ್ಪ ಎಂ.ಬಿ(ಹಾಕಿ), ಸುಕೇಶ್ ಹೆಗ್ಡೆ(ಕಬಡ್ಡಿ), ಗುರುರಾಜ(ಭಾರ ಎತ್ತುವುದು), ಸಂದೀಪ್ ಬಿ ಕಾಟೆ(ಕುಸ್ತಿ), ರೇವತಿ ನಾಯಕ ಎಂ (ಪ್ಯಾರಾ ಈಜುಪಟು)
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.