ಮುಂಬೈ: ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಮತ್ತು ಟ್ವೆಂಟಿ–20 ಕ್ರಿಕೆಟ್ ಸರಣಿ ಆಡಲು ತೆರಳಲಿರುವ ಭಾರತ ಮಹಿಳಾ ತಂಡಕ್ಕೆ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಲಹೆ ನೀಡಿದರು.
ಮುಂಬೈ ಕ್ರಿಕೆಟ್ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅವರು ಒಂದು ತಾಸಿಗೂ ಹೆಚ್ಚು ಕಾಲ ಕ್ರಿಕೆಟಿಗರ ಜೊತೆ ಮಾತನಾಡಿದರು.
ದಕ್ಷಿಣ ಆಫ್ರಿಕಾ ನೆಲದ ಪರಿಸ್ಥಿತಿ ಬಗ್ಗೆ ಗಾಬರಿಯಾಗದೆ ಗೆಲ್ಲುವ ಛಲದಿಂದ ಆಡುವಂತೆ ಮಿಥಾಲಿ ರಾಜ್ ನಾಯಕತ್ವದ ತಂಡಕ್ಕೆ ಸಚಿನ್ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.