ADVERTISEMENT

ವಿಶ್ವ ವಿಜೇತರಿಗೆ ಅದ್ದೂರಿ ಸ್ವಾಗತ

ಏಜೆನ್ಸೀಸ್
Published 5 ಫೆಬ್ರುವರಿ 2018, 19:30 IST
Last Updated 5 ಫೆಬ್ರುವರಿ 2018, 19:30 IST
ವಿಶ್ವ ವಿಜೇತರಿಗೆ ಅದ್ದೂರಿ ಸ್ವಾಗತ
ವಿಶ್ವ ವಿಜೇತರಿಗೆ ಅದ್ದೂರಿ ಸ್ವಾಗತ   

ಮುಂಬೈ: ನ್ಯೂಜಿಲೆಂಡ್‌ನಲ್ಲಿ ನಡೆದಿದ್ದ 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆದ್ದು ದಾಖಲೆ ಬರೆದಿದ್ದ ಭಾರತ ತಂಡದವರು ಸೋಮವಾರ ತವರಿಗೆ ಬಂದರು.

ಮಧ್ಯಾಹ್ನ 3.30ರ ಸುಮಾರಿಗೆ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪೃಥ್ವಿ ಶಾ ಬಳಗದ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.

ಮುಂಬೈ ಕ್ರಿಕೆಟ್‌ ಸಂಸ್ಥೆಯ (ಎಂಸಿಎ) ಅಧಿಕಾರಿಗಳು, ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು. ನಿಲ್ದಾಣದ ಹೊರಗೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು.

ADVERTISEMENT

ಕರ್ನಾಟಕದ ರಾಹುಲ್‌ ದ್ರಾವಿಡ್‌ ಮಾರ್ಗದರ್ಶನದಲ್ಲಿ ತರಬೇತುಗೊಂಡಿದ್ದ ಭಾರತ ತಂಡ ಜೂನಿಯರ್‌ ವಿಶ್ವಕಪ್‌ನಲ್ಲಿ ನಾಲ್ಕನೇ ಬಾರಿ ಪ್ರಶಸ್ತಿ ಜಯಿಸಿತ್ತು.

ಫೈನಲ್‌ನಲ್ಲಿ ಪೃಥ್ವಿ ಬಳಗ 8 ವಿಕೆಟ್‌ಗಳಿಂದ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿತ್ತು. ತಂಡ ಈ ಬಾರಿಯ ಟೂರ್ನಿಯ ಎಲ್ಲಾ ಪಂದ್ಯಗಳಲ್ಲೂ ಎದುರಾಳಿಗಳನ್ನು ಆಲೌಟ್‌ ಮಾಡಿದ ಸಾಧನೆಯನ್ನೂ ತನ್ನದಾಗಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.