ADVERTISEMENT

"10 ರಂದು ರಾಹುಲ್ ಗಾಂಧಿ ಗೋ ಬ್ಯಾಕ್ ಚಳವಳಿ": ವರದಿ ಜಾರಿ ಹೋರಾಟ ಸಮಿತಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 6:57 IST
Last Updated 7 ಫೆಬ್ರುವರಿ 2018, 6:57 IST
"10 ರಂದು ರಾಹುಲ್ ಗಾಂಧಿ ಗೋ ಬ್ಯಾಕ್ ಚಳವಳಿ": ವರದಿ ಜಾರಿ ಹೋರಾಟ ಸಮಿತಿ
"10 ರಂದು ರಾಹುಲ್ ಗಾಂಧಿ ಗೋ ಬ್ಯಾಕ್ ಚಳವಳಿ": ವರದಿ ಜಾರಿ ಹೋರಾಟ ಸಮಿತಿ   

ಬಳ್ಳಾರಿ: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಆಗ್ರಹಿಸಿ, ಫೆ.೧೦ ರಂದು ರಾಜ್ಯಕ್ಕೆ ಬರಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಡೆ ಒಡ್ಡಿ, ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ವರದಿ ಜಾರಿ ಹೋರಾಟ ಸಮಿತಿಯ ‌ಪ್ರಮುಖರಾದ ಮಾರಸಂದ್ರ ಮುನಿಯಪ್ಪ,  ಎನ್. ಮೂರ್ತಿ ತಿಳಿಸಿದರು.

೧೦ ರಂದು ರಾಹುಲ್ ಗಾಂಧಿ ಭೇಟಿ‌ ನೀಡಲಿರುವ ಎಲ್ಲ ಕಾರ್ಯಕ್ರಮಗಳಲ್ಲೂ ಪ್ರತಿಭಟಿಸಲಾಗುವುದು. ಅಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆಯೂ ಪ್ರತಿಭಟಿಸಲಾಗುವುದು ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಟಿ ಯಲ್ಲಿ ತಿಳಿಸಿದರು.

ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸು ಮಾಡದಿದ್ದರೆ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಚಾರ ನಡೆಸಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.