ADVERTISEMENT

ಅಂಧರ ಕ್ರಿಕೆಟ್‌ಗೆ ಮಾನ್ಯತೆ ನೀಡಲು ಸಚಿನ್ ತೆಂಡೂಲ್ಕರ್ ಒತ್ತಾಯ

ಏಜೆನ್ಸೀಸ್
Published 7 ಫೆಬ್ರುವರಿ 2018, 14:03 IST
Last Updated 7 ಫೆಬ್ರುವರಿ 2018, 14:03 IST
ಸಚಿನ್ ತೆಂಡೂಲ್ಕರ್‌ (ಸಂಗ್ರಹ ಚಿತ್ರ)
ಸಚಿನ್ ತೆಂಡೂಲ್ಕರ್‌ (ಸಂಗ್ರಹ ಚಿತ್ರ)   

ನವದೆಹಲಿ: ಅಂಧರ ಕ್ರಿಕೆಟ್‌ಗೆ ಮಾನ್ಯತೆ ನೀಡಿ ಆಟಗಾರರನ್ನು ಪಿಂಚಣಿ ಯೋಜನೆಯಡಿ ಸೇರಿಸಬೇಕು ಎಂದು ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು (ಬಿಸಿಸಿಐ) ಒತ್ತಾಯಿಸಿದ್ದಾರೆ.

ಈ ಕುರಿತು ಬಿಸಿಸಿಐ ಆಡಳಿತಾಧಿಕಾರಿಗಳ ಸಮಿತಿ (ಸಿಎಒ) ಅಧ್ಯಕ್ಷ ವಿನೋದ್ ರಾಯ್‌ಗೆ ಪತ್ರ ಬರೆದಿರುವ ಅವರು ‘ಅಂಧ ಕ್ರಿಕೆಟಿಗರ ತಂಡದವರು ನಾಲ್ಕನೇ ಬಾರಿ ವಿಶ್ವಕಪ್‌ ಗೆದ್ದಿದ್ದಾರೆ. ಆದರೂ ಅವರಿಗೆ ಮಾನ್ಯತೆ ಸಿಗಲಿಲ್ಲ’ ಎಂದು ಹೇಳಿದ್ದಾರೆ. ಜನವರಿ 20ರಂದು ನಡೆದ ಅಂಧರ ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಭಾರತ ತಂಡದ ಪ್ರಶಸ್ತಿ ಗೆದ್ದಿತ್ತು.

‘ಅಂಧ ಆಟಗಾರರು ಕ್ರೀಡಾಂಗಣದಲ್ಲಿ ತೋರುವ ಸಾಮರ್ಥ್ಯ ಇತರರಿಗೆ ಮಾದರಿ. ಭಾರತ ತಂಡದವರು ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತು ಆಟದ ಮೇಲೆ ಗಮನವಿಟ್ಟು ವಿಶ್ವಕಪ್ ಗೆದ್ದಿದ್ದಾರೆ. ಆ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ. ಅವರ ಗೆಲುವು ಮನುಷ್ಯನ ಮನಸ್ಸಿನ ಅಪರಿಮಿತ ಶಕ್ತಿಯನ್ನು ತೋರಿಸಿಕೊಟ್ಟಿದೆ’ ಎಂದು ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ವಿಶ್ವಕಪ್ ಗೆದ್ದ ತಂಡದ ಆಟಗಾರರನ್ನು ಗೌರವಿಸಲಾಗುವುದು ಎಂದು ವಿನೋದ್ ರಾಯ್ ಈ ಹಿಂದೆ ಘೋಷಿಸಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.