ಬೆಂಗಳೂರು: ರಾಷ್ಟ್ರೀಯ ಪ್ಯಾರಾ ಕ್ರೀಡಾಕೂಟದಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳ ಆಯ್ಕೆ ಟ್ರಯಲ್ಸ್ ಇದೇ 25ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮಾರ್ಚ್ನಲ್ಲಿ ಹರಿಯಾಣದ ಪಂಚಕುಲಾದಲ್ಲಿ ಕ್ರೀಡಾಕೂಟ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಅಂಗವಿಕಲ, ಗಾಲಿಕುರ್ಚಿ, ದೃಷ್ಠಿಮಾಂದ್ಯರು, ನರದೌರ್ಬಲ್ಯ ಮತ್ತು ಕುಬ್ಜರ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಕರ್ನಾಟಕ ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆಯ ಅಧ್ಯಕ್ಷರಾದ ಎಂ. ಮಹಾದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದರಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಈ ಹಿಂದೆ ಆಯಾ ಕ್ರೀಡೆಗಳಲ್ಲಿ ಕಾಲೇಜು ಮಟ್ಟ, ಜಿಲ್ಲಾ ಮಟ್ಟ ಅಥವಾ ರಾಜ್ಯಮಟ್ಟದ ಕ್ರೀಡೆಗಳಲ್ಲಿ ಸ್ಪರ್ಧಿಸಿರಬೇಕು. ಹೆಚ್ಚಿನ ಮಾಹಿತಿಗೆ ಆರ್. ರಾಮಚಂದ್ರ (ಮೋ: 9886014851) ಅವರನ್ನು ಸಂಪರ್ಕಿಸಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.