ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಆರು ಆಟಗಾರರನ್ನು ಬಿಡುಗಡೆ ಮಾಡಿದೆ. 15 ಆಟಗಾರರನ್ನು ಉಳಿಸಿಕೊಂಡಿದೆ.
ಆರಂಭಿಕ ಬ್ಯಾಟ್ಸ್ಮನ್ ಬ್ರೆಂಡನ್ ಮೆಕ್ಲಮ್, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್, ಕೋರಿ ಆ್ಯಂಡರ್ಸನ್, ಕ್ರಿಸ್ ವೋಕ್ಸ್, ಸರ್ಫರಾಜ್ ಖಾನ್, ಮನದೀಪ್ ಸಿಂಗ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಐಪಿಎಲ್ ಶುರುವಾದಾಗಿನಿಂದಲೂ ಆರ್ಸಿಬಿ ತಂಡವು ಪ್ರಶಸ್ತಿ ಗೆದ್ದಿಲ್ಲ. ಆದ್ದರಿಂದ ಈ ಬಾರಿ ತಂಡವನ್ನು ಬಲಿಷ್ಠಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಂಡದಲ್ಲಿ ಉಳಿದ ಆಟಗಾರರು: ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಪಾರ್ಥಿವ್ ಪಟೇಲ್, ವಾಷಿಂಗ್ಟನ್ ಸುಂದರ್, ಪವನ್ ನೇಗಿ, ಮೋಯಿನ್ ಆಲಿ, ಕಾಲಿನ್ ಡಿ ಗ್ರ್ಯಾಂಡ್ಹೋಮ್, ಮಾರ್ಕಸ್ ಸ್ಟೊಯಿನಿಸ್, ಯಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಟಿಮ್ ಸೌಥಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲವಂತ್ ಖೆಜ್ರೋಲಿಯಾ, ನೇಥನ್ ಕೌಲ್ಟರ್ನೈಲ್.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.