ADVERTISEMENT

ಲಾಕ್‌ಡೌನ್‌: ನಿರ್ಗತಿಕರಿಗೆ ಸಹಾಯ ಹಸ್ತ ಚಾಚಿದ ಸಚಿನ್‌

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 20:04 IST
Last Updated 10 ಏಪ್ರಿಲ್ 2020, 20:04 IST
ಸಚಿನ್‌ ತೆಂಡೂಲ್ಕರ್‌
ಸಚಿನ್‌ ತೆಂಡೂಲ್ಕರ್‌   

ಮುಂಬೈ: ಭಾರತದ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಹಸಿದವರಿಗೆ ಆಹಾರ ನೀಡಲು ಮುಂದಾಗಿದ್ದಾರೆ.

ಕೋವಿಡ್‌–19ನಿಂದ ಬಳಲುತ್ತಿರುವವರಿಗೆ ಸಹಾಯ ಹಸ್ತ ಚಾಚಿದ್ದ ಸಚಿನ್‌, ಈ ಹಿಂದೆ ₹50 ಲಕ್ಷ ದೇಣಿಗೆ ನೀಡಿದ್ದರು.

ಅಪ್ನಾಲಯ ಸ್ವಯಂ ಸೇವಾ ಸಂಸ್ಥೆ ಜೊತೆ ಕೈಜೋಡಿಸಿರುವ ಸಚಿನ್‌, 5000 ಮಂದಿಗೆ ಒಂದು ತಿಂಗಳು ದಿನಸಿ ಒದಗಿಸಲು ತೀರ್ಮಾನಿಸಿದ್ದಾರೆ.

ADVERTISEMENT

‘ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ನಾವು ಆಹಾರ ಪೂರೈಸುತ್ತಿದ್ದೇವೆ. ನಮ್ಮ ಈ ಕಾರ್ಯಕ್ಕೆ ಸಚಿನ್‌ ತೆಂಡೂಲ್ಕರ್‌ ಕೈಜೋಡಿಸಿದ್ದಾರೆ. ಅವರಿಗೆ ಕೃತಜ್ಞತೆಗಳು’ ಎಂದು ಶುಕ್ರವಾರ ಅಪ್ನಾಲಯ ಸಂಸ್ಥೆ ಟ್ವೀಟ್‌ ಮಾಡಿದೆ.

‘ನಿರ್ಗತಿಕರ ನೋವಿಗೆ ಮಿಡಿದಿರುವ ಅಪ್ನಾಲಯ ಸಂಸ್ಥೆಗೆ ಶುಭವಾಗಲಿ. ನೀವು ಉತ್ತಮ ಕೆಲಸ ಮಾಡುತ್ತಿದ್ದೀರಿ. ಇದನ್ನು ಹೀಗೆ ಮುಂದುವರಿಸಿ’ ಎಂದು ಸಚಿನ್‌ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.