ADVERTISEMENT

ಸಿಎಸಿಗೆ ಅಶೋಕ್, ಜತಿನ್

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 16:04 IST
Last Updated 1 ಡಿಸೆಂಬರ್ 2022, 16:04 IST

ನವದೆಹಲಿ: ಭಾರತ ತಂಡದ ಮಾಜಿ ಆಟಗಾರರಾದ ಅಶೋಕ್ ಮಲ್ಹೋತ್ರಾ ಹಾಗೂ ಜತಿನ್ ಪರಾಂಜಪೆ ಅವರನ್ನು ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ)ಗೆ ನೇಮಕ ಮಾಡಲಾಗಿದೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ರಾಷ್ಟ್ರೀಯ ಸೀನಿಯರ್ ಕ್ರಿಕೆಟ್ ಆಯ್ಕೆ ಸಮಿತಿಯನ್ನು ಸಿಎಸಿಯು ಆಯ್ಕೆ ಮಾಡಲಿದೆ.

ಈ ಹಿಂದಿನ ಅವಧಿಯಲ್ಲಿ ಮದನ್ ಲಾಲ್ ಹಾಗೂ ರುದ್ರಪ್ರತಾಪ್ ಸಿಂಗ್ ಅವರು ಈ ಸಮಿತಿಯಲ್ಲಿದ್ದರು. ಅದರಲ್ಲಿದ್ದ ಸುಲಕ್ಷಣಾ ನಾಯಕ್ ಅವರು ಹೊಸ ಸಮಿತಿಯಲ್ಲಿಯೂ ಮುಂದುವರಿಯಲಿದ್ದಾರೆ.

ADVERTISEMENT

‘ಅಶೋಕ್ ಅವರು ಏಳು ಟೆಸ್ಟ್ ಹಾಗೂ 20 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅವರು ಭಾರತ ಕ್ರಿಕೆಟಿಗರ ಸಂಘದ ನಿಕಟಪೂರ್ವ ಅಧ್ಯಕ್ಷರೂ ಹೌದು. ಪರಾಂಜಪೆ ಭಾರತ ತಂಡದಲ್ಲಿ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದಾರೆ ಹಾಗೂ ಸೀನಿಯರ್ ಪುರುಷ ತಂಡದ ಆಯ್ಕೆಗಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.