ADVERTISEMENT

ಏಷ್ಯಾ ಕಪ್ ಕ್ರಿಕೆಟ್: ಬಾಂಗ್ಲಾ ಎದುರು ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಸೆಪ್ಟೆಂಬರ್ 2023, 9:38 IST
Last Updated 15 ಸೆಪ್ಟೆಂಬರ್ 2023, 9:38 IST
<div class="paragraphs"><p>ರೋಹಿತ್‌, ಶಕಿಬ್‌</p></div>

ರೋಹಿತ್‌, ಶಕಿಬ್‌

   

ಕೊಲಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಈಗಾಗಲೇ ಫೈನಲ್‌ ಪ್ರವೇಶಿಸಿರುವ ಭಾರತವು ಇಂದು ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು  ಎದುರಿಸಲಿದೆ. ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ದುಕೊಂಡಿದೆ. 

ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ದುಕೊಂಡಿದೆ. ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದು ಹೊಸಬರಿಗೆ ಅವಕಾಶ ಕಲ್ಪಿಸಿದೆ.

ADVERTISEMENT

ಭಾರತ ತಂಡದಲ್ಲಿ ಸೂರ್ಯಕುಮಾರ್‌ ಯಾದವ್‌, ತಿಲಕ್‌ ವರ್ಮಾ, ಪ್ರಸಿದ್ಧ್‌ ಕೃಷ್ಣ, ಶಮಿ, ಶಾರ್ದೂಲ್‌ ಠಾಕೂರ್‌ ಕಣಕ್ಕೆ ಇಳಿದಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದ ತಂಡಕ್ಕೆ ಇದು ಔಪಚಾರಿಕ ಪಂದ್ಯ ವಾಗಿದೆ. ಅಂತೆಯೇ ಮೊದಲೆರಡೂ ಪಂದ್ಯಗಳಲ್ಲಿ ಸೋತಿರುವ ಬಾಂಗ್ಲಾದೇಶ, ಇದರಲ್ಲಿ ಗೆದ್ದರೂ ಫೈನಲ್ ಪ್ರವೇಶಿಸಲು ಸಾಧ್ಯವಿಲ್ಲ. 

ಆದರೆ, ಮುಂಬರುವ ವಿಶ್ವಕಪ್ ಟೂರ್ನಿಗಾಗಿ ಏಷ್ಯಾ ಕಪ್ ಹಾಗೂ ಇದೇ ತಿಂಗಳು ನಡೆಯುವ ಆಸ್ಟ್ರೇಲಿಯಾ ಎದುರಿನ ಸರಣಿಗಳು ಭಾರತ ತಂಡಕ್ಕೆ ಪೂರ್ವ ಅಭ್ಯಾಸದ ವೇದಿಕೆಗಳಾಗಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.