ನವದೆಹಲಿ: ವಿಕೆಟ್ಕೀಪರ್, ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಭವಿಷ್ಯದಲ್ಲಿ ಭಾರತ ತಂಡದ ನಾಯಕತ್ವ ವಹಿಸುವ ಸಮರ್ಥ ಆಟಗಾರನಾಗಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಹೇಳಿದ್ದಾರೆ.
ಈ ಬಾರಿಯಲ್ಲಿ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ನಾಯಕರಾಗಿ ನೇಮಕವಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಜರ್, ‘ಕಳೆದ ಕೆಲವು ತಿಂಗಳುಗಳಲ್ಲಿ ರಿಷಭ್ ಅಮೋಘ ಆಟವಾಡಿದ್ದಾರೆ. ಮುಂದೊಂದು ದಿನ ಭಾರತ ತಂಡದ ನಾಯಕನ ಸ್ಥಾನಕ್ಕೆ ಆಯ್ಕೆ ಸಮಿತಿಯು ರಿಷಭ್ ಅವರನ್ನು ಪರಿಗಣಿಸಿದರೆ ನನಗಂತೂ ಅಚ್ಚರಿಯಾಗುವುದಿಲ್ಲ‘ ಅಭಿಪ್ರಾಯಪಟ್ಟಿದ್ದಾರೆ.
ಹೋದ ಡಿಸೆಂಬರ್–ಜನವರಿಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟೆಸ್ಟ್ ಸರಣಿ, ಫೆಬ್ರುವರಿ –ಮಾರ್ಚ್ನಲ್ಲಿ ಭಾರತದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್, ಟಿ20 ಮತ್ತು ಏಕದಿನ ಸರಣಿಗಳಲ್ಲಿ ರಿಷಭ್ ಮಿಂಚಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.