ಪುಣೆ: ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್ಸಿಎ) ಮತ್ತು ಹರಿಯಾಣ ಕ್ರಿಕೆಟ್ ಸಂಸ್ಥೆ (ಎಚ್ಸಿಎ)ಗಳಿಗೆ, ಇದೇ 23ರಂದು ಮುಂಬೈನಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಳ್ಳದಂತೆ ಆಡಳಿತಾಧಿಕಾರಿಗಳ ಸಮಿತಿ (ಸಿಒಎ) ನಿರ್ಬಂಧ ಹೇರಿದೆ.
ಪರಿಷ್ಕೃತ ನಿಯಮಾವಳಿಗೆ ಅನುಸಾರವಾಗಿ ನಡೆದುಕೊಳ್ಳದಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ (ಎಂಸಿಎ) ವಿರುದ್ಧವೂ ಇದೇ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
‘ಸುಪ್ರೀಂ ಕೋರ್ಟ್ನ 2018 ಆಗಸ್ಟ್ 9ರ ಆದೇಶದಂತೆ ನಿಯಮಾವಳಿಗಳಿಗೆ ತಿದ್ದುಪಡಿ ಮಾಡದ ಕಾರಣ ಈ ಎರಡು ರಾಜ್ಯ ಘಟಕಗಳಿಗೆ ಸರ್ವಸದಸ್ಯರ ಸಭೆಯಲ್ಲಿ ಪಾಲ್ಗೊಳ್ಳದಂತೆ ಸೂಚಿಸಿರುವುದು ನಿಜ’ ಎಂದು ಸಿಒಎಗೆ ನಿಕಟವಾಗಿರುವ ಮೂಲವೊಂದು ಪಿಟಿಐಗೆ ಖಚಿತಪಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.